News Karnataka Kannada
Thursday, May 02 2024
ವಿಜಯಪುರ

ಸಿಡಿಲು ಬಡಿದು ಐತಿಹಾಸಿಕ ಮೆಹತರ ಮಹಲ್ ಗೆ ಹಾನಿ: ಒಂದು ಕಾರು, ಎರಡು ಬೈಕ್ ಜಖಂ

ಗುಮ್ಮಟ ನಗರಿ ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಮಳೆಗೆ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೆಹತರ ಮಹಲ್ ಗೆ ಸ್ವಲ್ಪ ಹಾನಿಯಾಗಿದ್ದು, ಒಂದು ಕಾರು, ಎರಡು ಬೈಕುಗಳು ಜಖಂ ಗೊಂಡಿವೆ.
Photo Credit : NewsKarnataka

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಮಳೆಗೆ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೆಹತರ ಮಹಲ್ ಗೆ ಸ್ವಲ್ಪ ಹಾನಿಯಾಗಿದ್ದು, ಒಂದು ಕಾರು, ಎರಡು ಬೈಕುಗಳು ಜಖಂಗೊಂಡಿವೆ.

ಸಂಜೆ ಗಾಳಿ, ಗುಡುಗು ಮತ್ತು ಸಿಡಿಲು ಸಹಿತ ಮಳೆ ಸುರಿದಿದೆ. ಈ ಸಂದರ್ಭದಲ್ಲಿ ಮೆಹತರ ಮಹಲ್ ನ ಮಿನಾರ್ ವೊಂದರ ಮೇಲ್ಭಾಗದಲ್ಲಿ ಮಿಂಚು ಸಹಿತ ಸಿಡಿಲು ಬಡಿದಿದ್ದು, ಆ ಭಾಗದ ಕಲ್ಲುಗಳು ಕೆಳಗೆ ಬಿದ್ದಿವೆ. ಇದರಿಂದಾಗಿ ಸ್ಮಾರಕದ ಎದುರು ನಿಲ್ಲಿಸಲಾಗಿದ್ದ ಒಂದು ಕಾರು ಮತ್ತು ಎರಡು ಬೈಕ್ ಗಳು ಜಖಂ ಗೊಂಡಿವೆ. ಅದೃಷ್ಠವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಉತ್ತರ ದಿಕ್ಕಿಗೆ ಮುಖ ಮಾಡಿರುವ ಈ ಸ್ಮಾರಕ ಬಲಭಾಗದಲ್ಲಿರುವ ಮಿನಾರ್ ನ ಮೇಲ್ಭಾಗಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.ಆದಿಲ್ ಶಾಹಿ ಕಾಲದಲ್ಲಿ ಎರಡನೇ ಅಲಿ ಆದಿಲ್ ಶಾಹಿ 17ನೇ ಶತಮಾನದಲ್ಲಿ ಈ ಸ್ಮಾರಕ ನಿರ್ಮಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು