News Karnataka Kannada
Monday, May 13 2024
ವಿಜಯಪುರ

ಸಿದ್ದಲಿಂಗ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು : ಓರ್ವ ಗಂಭೀರ

ಸಿದ್ದಲಿಂಗ ಮುತ್ಯಾನ ಜಾತ್ರೆಯಲ್ಲಿ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
Photo Credit : NewsKarnataka

ವಿಜಯಪುರ: ಸಿದ್ದಲಿಂಗ ಮುತ್ಯಾನ ಜಾತ್ರೆಯಲ್ಲಿ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಸಂಜೆ ನಡೆದ ರಥೋತ್ಸವದ ವೇಳೆ ಈ ಅವಘಡ ಸಂಭವಿಸಿದೆ. ಬಂಡು ಕಟಕದೊಂಡ್ (40), ಸೋಬು ಕಟದೊಂಡ್ (55) ಮೃತ ದುರ್ದೈವಿಗಳು.

ಇಂದು ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಪವಾಡ ಪುರುಷ ಸಿದ್ದಲಿಂಗ ಮುತ್ಯಾನ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ಈ ಸಿದ್ದಲಿಂಗ ಮುತ್ಯಾನ ಜಾತ್ರೆಗೆ ಲಕ್ಷಾಂತರ ಭಕ್ತರು ಸೇರಿಕೊಂಡಿದ್ದರು. ಹೀಗೆ ರಥ ಎಳೆಯುತ್ತಿದ್ದ ವೇಳೆ ಆಯತಪ್ಪಿ ಚಕ್ರದಡಿ ಸಿಲುಕಿದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ತಡವಾಳ ಗ್ರಾಮದ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಆತನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು