ವಿಜಯಪುರ: ಲೋಕಸಭೆ ಚುನಾವಣೆಯ ಮಹತ್ವವನ್ನು ನಮ್ಮ ಜನ ಅರಿಯುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದು ಶಾಸಕ ಸುನೀಲಗೌಡ ಪಾಟೀಲ ಹೇಳಿದರು.
ಅವರು ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಚುನಾವಣಾ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಪಂ, ವಿಧಾನಸಭೆಯಂತೆ ಲೋಕಸಭೆ ಕ್ಷೇತ್ರವೂ ಅಷ್ಟೇ ಮುಖ್ಯವಾಗಿದೆ ಎಂದರು.
ನಮ್ಮ ಸಮಸ್ಯೆ ಪರಿಹಾರಕ್ಕೆ ಸಂಸದರೂ ಅಷ್ಟೇ ಅಗತ್ಯ. ಜಿಲ್ಲೆಯಲ್ಲಿ ನೀರಾವರಿ ಯೋಜನೆಯಿಂದ ಬಹಳ ಅಭಿವೃದ್ಧಿಯಾಗಿದೆ. ರಾಜ್ಯ ಸರಕಾರ, ಸಚಿವ ಎಂ.ಬಿ.ಪಾಟೀಲರ ಕಳಕಳಿಯಿಂದ ಇದು ಸಾಧ್ಯವಾಗಿದೆ. ಹಾಗೆಯೇ ಸದ್ಯದ ಚುನಾವಣೆಯಲ್ಲಿ ಉತ್ತಮ ಸಂಸದ ಆಯ್ಕೆಯಾದರೆ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸಲು ಅವರು ದನಿಯಾಗುತ್ತಾರೆ.
ರಾಷ್ಟ್ರೀಯ ಯೋಜನೆಯಾಗಿ ಯುಕೆಪಿಯನ್ನು ಘೋಷಿಸಿದರೆ ಈಗಿನದ್ದಕ್ಕಿಂತ ಹತ್ತು ಪಟ್ಟು ನೀರಾವರಿ ಆಗಲಿದೆ. ಈ ಕೆಲಸವನ್ನು ಮೂರು ಸಲ ಸಂಸದರಾಗಿದ್ದ ಜಿಗಜಿಣಗಿಯವರು ಕೇಂದ್ರದಲ್ಲಿ ಮಾಡಲಿಲ್ಲ. ರಾಜು ಆಲಗೂರರನ್ನು ಆರಿಸಿದರೆ ಅವರು ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗಲಿದ್ದಾರೆ ಎಂದು ಕೋರಿದರು.
ಅಭ್ಯರ್ಥಿ ರಾಜು ಆಲಗೂರ ಮಾತನಾಡಿ, ಪ್ರಾಧ್ಯಾಪಕನಾಗಿ ನಾನು ಹಲವು ವರ್ಷಗಳ ಕಾಲ ದುಡಿದ್ದೇನೆ. ಶಿಕ್ಷಣ ಕ್ಷೇತ್ರದ ಅನುಭವ ನನಗಿದೆ. ಕ್ಷೇತ್ರದ ಅಭಿವೃದ್ಧಿ ಜೊತೆಗೆ ನಿಮ್ಮೊಂದಿಗೆ ನಾನು ಇರುವೆ ಎಂದು ಹೇಳಿದರು.
ಸಂಸ್ಥೆ ನಿರ್ದೇಶಕ ಸಲಾವುದ್ದೀನ್ ಪ್ರಾಸ್ತಾವಿಕ ಮಾತನಾಡಿ, ಬಸವಣ್ಣನವರ ನಾಡಿನ ನಾವು ಸಮಾನತೆ ಕಲಿತವರು. ಈ ನೆಲ ಸೌಹಾರ್ದತೆಯಿಂದ ಕೂಡಿದೆ. ನ್ಯಾಯವಿದ್ದಲ್ಲಿ ಶಾಂತಿ ಇದೆ. ಬಸವ ತತ್ವಗಳನ್ನು ಎತ್ತಿ ಹಿಡಿಯಬೇಕು. ನಾವೆಲ್ಲ ಲೋಕಸಭೆ ಚುನಾವಣೆಯಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕು ಎಂದರು. ಎ.ಎಸ್.ಪಾಟೀಲ ಸ್ವಾಗತಿಸಿದರು. ರಾಜಶೇಖರ ಯಡಹಳ್ಳಿ ಅತಿಥಿಯಾಗಿದ್ದರು.
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…