News Karnataka Kannada
Saturday, April 27 2024
ವಿಜಯಪುರ

ಸಂಚು ಮಾಡಿ ಯತ್ನಾಳ್ ಅವರಿಗೆ ಪ್ರತಿಪಕ್ಷ ಸ್ಥಾನ ತಪ್ಪಿಸಿದರು ಎಂದ ಜಯಮೃತ್ಯುಂಜಯ ಸ್ವಾಮೀಜಿ

Jayamrityunjaya Swamiji conspired to deny Yatnal the post of opposition
Photo Credit : News Kannada

ವಿಜಯಪುರ: ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರತಿಪಕ್ಷ ನಾಯಕ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ಒಕ್ಕಲಿಗ ಸಮುದಾಯದ ಆರ್‌ ಅಶೋಕ್‌ಗೆ ಮಣೆ ಹಾಕಿದೆ. ಇದರಿಂದ ಯತ್ನಾಳ್‌ ಅಸಮಾಧಾನಗೊಂಡಿದ್ದಾರೆ. ಈಗ ಯತ್ನಾಳ್‌ ಪರವಾಗಿ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಬ್ಯಾಟ್‌ ಬೀಡಿದ್ದಾರೆ.

ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಪಂಚಮಸಾಲಿ ಸಮಾಜಕ್ಕೆ ಸಿಗುವ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ. ಇದರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಉತ್ತರ ಕರ್ನಾಟಕದ ಯಾರಿಗಾದರೂ ವಿಪಕ್ಷ ನಾಯಕ ಸ್ಥಾನ ನೀಡಬೇಕಿತ್ತು. ಬಿಜೆಪಿ ಮೊದಲಿನಿಂದಲೂ ಪಂಚಮಸಾಲಿ ಸಮುದಾಯದ ನಾಯಕರನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದಾರೆ ಎಂದು ಬೇಸರಿಸಿದರು. ಪಂಚಮಸಾಲಿ ಹೋರಾಟದಲ್ಲಿ ಇದ್ದವರನ್ನೇ ಟಾರ್ಗೆಟ್ ಮಾಡಿದ್ದಾರೆ.

ಹೋರಾಟ ವಿರೋಧಿಸಿದ ಸಮಾಜದ ಕೆಲವರೊಟ್ಟಿಗೆ ಸೇರಿ ಒಳಸಂಚು ಮಾಡಿ ಯತ್ನಾಳ್ ಅವರಿಗೆ ಸಿಗಬೇಕಿದ್ದ ವಿಪಕ್ಷ ನಾಯಕ ಸ್ಥಾನವನ್ನ ತಪ್ಪಿಸಿದ್ದಾರೆ ಎಂದು ದೂರಿದರು. ಬೆಳಗಾವಿ ಚಳಿಗಾಲದ ಅಧಿವೇಶನದ ಒಳಗಾಗಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ‌ ನೀಡಿ. ಮೀಸಲಾತಿ ಘೋಷಿಸದಿದ್ದರೆ ಅಧಿವೇಶನದಲ್ಲಿ ಲಿಂಗ ಪೂಜೆ ಮಾಡುತ್ತೇವೆ‌. ಜಾತ್ಯತೀತ ಅಂತ ಹೇಳುವ ಸಿಎಂ‌ ಸಿದ್ದರಾಮಯ್ಯ ನಮ್ಮ‌ ಸಮುದಾಯಕ್ಕೆ ಮೀಸಲಾತಿ ನೀಡಲಿ ಎಂದು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು