ವಿಜಯಪುರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಎಂಬ ಬರಹಕ್ಕೆ ಬದಲಾಗಿ, ‘ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ’ ಎಂದು ಬರೆಯಿಸಲಾಗಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆ ಎಚ್ಚೆತ್ತ ಸಮಾಜ ಕಲ್ಯಾಣ ಇಲಾಖೆ ಮೊದಲಿದ್ದ ಬರಹವನ್ನೇ ಬರೆಸಲು ಸೂಚಿಸಿದೆ.
ಸದ್ಯ ಈಗ ವಸತಿ ಶಾಲೆಯ ಪ್ರಿನ್ಸಿಪಾಲ್ ದುಂಡಪ್ಪ ಒಡಜೆ, ಹಾಸ್ಟೆಲ್ನಲ್ಲಿ ಮೊದಲಿದ್ದ ಘೋಷವಾಕ್ಯವನ್ನೇ ಬರೆಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ರಿನ್ಸಿಪಾಲ್ ದುಂಡಪ್ಪ ಒಡಜೆ, ರಾಷ್ಟ್ರಕವಿ ಕುವೆಂಪು ಅವರ ಕವನ ಸಾಲುಗಳನ್ನು ತಿರುಚಿ ಬರಹ ಬರೆಯಲಾಗಿತ್ತು. ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂದು ಪುನಃ ಮೊದಲಿನಂತೆ ಬರೆಸಿದ್ದೇವೆ ಎಂದು ಪ್ರಾಂಶುಪಾಲರು ಮಾಹಿತಿ ನೀಡಿದರು.
ಟೆಲಿಗ್ರಾಂ ಗ್ರೂಪ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರ ಸೂಚನೆ ಮೇರೆಗೆ ಬದಲಾವಣೆ ಮಾಡಲಾಗಿತ್ತು. ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬಳಿಕ ನಾವು ಬರೆಸಿದ ಬರಹವನ್ನು ಬದಲಾವಣೆ ಮಾಡಿದ್ದೇವೆ. ಈಗ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎಂದು ಬರೆಸಿದ್ದೇವೆ ಎಂದು ತಿಳಿಸಿದರು.