ವಿಜಯಪುರ: ಬಿಜೆಪಿ ಹಿರಿಯ ಮುತ್ಸದ್ದಿ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವುದಕ್ಕೆ ನಮ್ಮ ತಕರಾರೇನೂ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅವರು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಅಡ್ವಾಣಿಯವರು ದೇಶದ ಹಿರಿಯ ರಾಜಕಾರಣಿ. ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರೇನೂ ಇಲ್ಲ. ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮದೇನು ತಕರಾರು ಇಲ್ಲ. ಆದರೆ ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಕೊಡಿ ಎಂದು ಆಗ್ರಹಿಸಿದ್ದಾರೆ.
ಈ ಹಿಂದೆಯೇ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ನಮ್ಮ ಸರ್ಕಾರ ಮನವಿ ಮಾಡಿತ್ತು. ಅದು ಅವರಿಗೆ ಬಿಟ್ಟ ವಿಚಾರ. ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಶ್ರೀಗಳು ಹೆಸರಾಗಿದ್ದವರು. ಅವರಿಗೆ ಗೌರವ ಸಲ್ಲಿಸಬೇಕು ಅನ್ನೋದು ನಮ್ಮ ಆಶಯ ಎಂದರು.
ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…
ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್ ಕಾಲಿಗೆ…
ಅಮೇರಿಕಾದಲ್ಲಿ ಎಂಡಿಎಚ್ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…
ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…