ವಿಜಯಪುರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ವಿಜಯಪುರ ನಗರದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಹೌದು. . ವಿಜಯಪುರ ನಗರದಲ್ಲಿ ಟೊಯೋಟಾ ಕಾರಿನಲ್ಲಿ ಬರೋಬ್ಬರಿ 2 ಕೋಟಿ 93 ಲಕ್ಷ 50 ಸಾವಿರ ರೂಪಾಯಿ ಹಣ ಸಾಗಿಸಲಾಗಿತ್ತು. ಸಿಂದಗಿ ಬೈಪಾಸ್ ಬಳಿಯ ಚೆಕ್ ಪೋಸ್ಟ್ ಬಳಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹಣ ಜಪ್ತಿ ಮಾಡಿದ್ದಾರೆ.
2 ಕೋಟಿ 93 ಲಕ್ಷ 50 ಸಾವಿರ ರೂಪಾಯಿ ಹಣವನ್ನು ಹೈದ್ರಾಬಾದ್ನಿಂದ ಹುಬ್ಬಳ್ಳಿಗೆ ಟೋಯೊಟಾ ಕಾರಿನಲ್ಲಿ ಸಾಗಿಸುತ್ತಿದ್ದರು ಎನ್ನಲಾಗಿದೆ. ಟೋಯೋಟಾ ಕಾರು, ನಗದು ಹಣ ಹಾಗೂ ಎರಡು ಮೊಬೈಲ್ ಸೇರಿದಂತೆ ಕಾರಿನಲ್ಲಿದ್ದ ಬಾಲಾಜಿ ನಿಕ್ಕಂ, ಸಚಿನ್ ಮೋಯಿತೆ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.