News Karnataka Kannada
Saturday, May 04 2024
ವಿಜಯಪುರ

ಧ್ವಜಾರೋಹಣದ ವೇಳೆಯಲ್ಲೇ ವ್ಯಕ್ತಿಯೋರ್ವನಿಂದ ಗುಂಡಿನ ದಾಳಿ

ಜಿಲ್ಲೆಯಲ್ಲಿ ಇಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣದ ವೇಳೆಯಲ್ಲೇ ಬೆಚ್ಚಿಬೀಳಿಸೋ ಘಟನೆ ನಡೆದಿದೆ. ವ್ಯಕ್ತಿಯೋರ್ವ ದಿಢೀರ್ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
Photo Credit : News Kannada

ವಿಜಯಪುರ: ಜಿಲ್ಲೆಯಲ್ಲಿ ಇಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣದ ವೇಳೆಯಲ್ಲೇ ಬೆಚ್ಚಿಬೀಳಿಸೋ ಘಟನೆ ನಡೆದಿದೆ. ವ್ಯಕ್ತಿಯೋರ್ವ ದಿಢೀರ್ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಹಿರೇರು ಗ್ರಾಮದಲ್ಲಿ ಇಂದು 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಮುಖಂಡ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹೊಡೆಯೋದಕ್ಕೆ ಹೋಗಿ, ನೆರೆದಿದ್ದಂತ ಜನರ ಮೇಲೆ ಗುಂಡು ಹಾರಿಸಿದ್ದಾನೆ.

ಮಲ್ಲು ಗಿನ್ನಿ ಎಂಬಾತ ಅಚಾನಕ್ಕಾಗಿ ಹಾರಿಸಿದಂತ ಈ ಗುಂಡು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸೋಮವ್ವ ಎಂಬುವರ ತೊಡೆ ಭಾಗಕ್ಕೆ ಹೊಕ್ಕಿದೆ. ತೀವ್ರ ರಕ್ತ ಸ್ತ್ರಾವದೊಂದಿಗೆ ಕುಸಿದು ಬಿದ್ದಂತ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿಯಿಂದಾಗಿ ಗಾಯಗೊಂಡಿರುವಂತ ಸೋಮವ್ವ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಈ ಘಟನೆಯ ಬಳಿಕ ಕನ್ನಡ ಪರ ಸಂಘಟನೆಯ ಮುಖಂಡ ಮಲ್ಲು ಗಿನ್ನಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಪ್ರಕರಣ ದಾಖಲಿಸಿಕೊಂಡು, ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು