News Karnataka Kannada
Sunday, April 28 2024
ವಿಜಯಪುರ

ಅಕ್ರಮವಾಗಿ ಸಾಗಿಸ್ತಿದ್ದ 110ಕ್ಕೂ ಹೆಚ್ಚು ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಗ್ರಾಮಸ್ಥರೇ ತಡೆದು ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ನಡೆದಿದೆ.
Photo Credit : News Kannada

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಗ್ರಾಮಸ್ಥರೇ ತಡೆದು ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ  ನಡೆದಿದೆ.

ಮಹಾರಾಷ್ಟ್ರದಿಂದ ವಿಜಯಪುರ ಜಿಲ್ಲೆಯ ಸಿಂದಗಿಗೆ ಬೊಲೆರೊ ಪಿಕ್​ಅಪ್, ಗೂಡ್ಸ್ ವಾಹನ ಸೇರಿದಂತೆ ಒಟ್ಟು ಮೂರು ವಾಹನಗಳಲ್ಲಿ ಮಧ್ಯರಾತ್ರಿ ಅಕ್ರಮವಾಗಿ 110ಕ್ಕೂ ಹೆಚ್ಚು ಗೋವುಗಳನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಹಿರೇಬೇವನೂರು ಗ್ರಾಮಸ್ಥರು ವಾಹನಗಳನ್ನು ತಡೆಯುತ್ತಿದ್ದಂತೆ ಇಬ್ಬರು ಚಾಲಕರು ಪರಾರಿಯಾಗಿದ್ದಾರೆ.

ಇನ್ನು ಜನರ ಕೈಗೆ ಸಿಕ್ಕಿ ಬಿದ್ದ ಓರ್ವ ಚಾಲಕನನ್ನು ಗ್ರಾಮಸ್ಥರು ಪೊಲೀಸರಿಗೊಪ್ಪಿಸಿದ್ದಾರೆ. 3 ವಾಹನಗಳಲ್ಲಿಯೂ ಆಕಳು ಹಾಗೂ ಕರುಗಳ ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು. ಇದರಿಂದ ಉಸಿರುಗಟ್ಟಿ ವಾಹನದಲ್ಲೇ 1 ಗೋವು ಮತ್ತು 11 ಕರುಗಳು ಮೃತಪಟ್ಟಿವೆ.

ಸ್ಥಳಕ್ಕೆ ಆಗಮಿಸಿದ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟಿದ್ದ 1 ಗೋವು, 11 ಕರುಗಳ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಮಾಡಲಾಗಿದೆ. ಜೊತೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಪೊಲೀಸರು ಗೋಶಾಲೆಗೆ ಕಳುಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು