ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಗ್ರಾಮಸ್ಥರೇ ತಡೆದು ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಮಹಾರಾಷ್ಟ್ರದಿಂದ ವಿಜಯಪುರ ಜಿಲ್ಲೆಯ ಸಿಂದಗಿಗೆ ಬೊಲೆರೊ ಪಿಕ್ಅಪ್, ಗೂಡ್ಸ್ ವಾಹನ ಸೇರಿದಂತೆ ಒಟ್ಟು ಮೂರು ವಾಹನಗಳಲ್ಲಿ ಮಧ್ಯರಾತ್ರಿ ಅಕ್ರಮವಾಗಿ 110ಕ್ಕೂ ಹೆಚ್ಚು ಗೋವುಗಳನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಹಿರೇಬೇವನೂರು ಗ್ರಾಮಸ್ಥರು ವಾಹನಗಳನ್ನು ತಡೆಯುತ್ತಿದ್ದಂತೆ ಇಬ್ಬರು ಚಾಲಕರು ಪರಾರಿಯಾಗಿದ್ದಾರೆ.
ಇನ್ನು ಜನರ ಕೈಗೆ ಸಿಕ್ಕಿ ಬಿದ್ದ ಓರ್ವ ಚಾಲಕನನ್ನು ಗ್ರಾಮಸ್ಥರು ಪೊಲೀಸರಿಗೊಪ್ಪಿಸಿದ್ದಾರೆ. 3 ವಾಹನಗಳಲ್ಲಿಯೂ ಆಕಳು ಹಾಗೂ ಕರುಗಳ ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು. ಇದರಿಂದ ಉಸಿರುಗಟ್ಟಿ ವಾಹನದಲ್ಲೇ 1 ಗೋವು ಮತ್ತು 11 ಕರುಗಳು ಮೃತಪಟ್ಟಿವೆ.
ಸ್ಥಳಕ್ಕೆ ಆಗಮಿಸಿದ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟಿದ್ದ 1 ಗೋವು, 11 ಕರುಗಳ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಮಾಡಲಾಗಿದೆ. ಜೊತೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಪೊಲೀಸರು ಗೋಶಾಲೆಗೆ ಕಳುಹಿಸಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ