News Karnataka Kannada
Sunday, May 05 2024
ವಿಜಯಪುರ

ಬಿಜೆಪಿಯಿಂದ ಭಗವಾನ್ ಮಹಾವೀರ ಜಯಂತಿ‌ ಆಚರಣೆ : ಪ್ರಕಾಶ ಅಕ್ಕಲಕೋಟ

ಬಿಜೆಪಿಗೂ ಜೈನ ಸಮುದಾಯಕ್ಕೂ ಜನಸಂಘ ಕಾಲದಿಂದ ಅವಿನಾಭಾವ ಸಂಬಂಧವಿದ್ದು, ಇಂದಿಗೂ ಎಲ್ಲಾ‌ ರೀತಿಯಲ್ಲಿ ಸಹಕಾರ ನೀಡುತ್ತಾ ನಮಗೆ ಬೆನ್ನೆಲುಬಾಗಿ ನಿಂತಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಅವರು ಅಭಿಮತ‌ ವ್ಯಕ್ತಪಡಿಸಿದರು.
Photo Credit : NewsKarnataka

ವಿಜಯಪುರ : ಬಿಜೆಪಿಗೂ ಜೈನ ಸಮುದಾಯಕ್ಕೂ ಜನಸಂಘ ಕಾಲದಿಂದ ಅವಿನಾಭಾವ ಸಂಬಂಧವಿದ್ದು, ಇಂದಿಗೂ ಎಲ್ಲಾ‌ ರೀತಿಯಲ್ಲಿ ಸಹಕಾರ ನೀಡುತ್ತಾ ನಮಗೆ ಬೆನ್ನೆಲುಬಾಗಿ ನಿಂತಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಅವರು ಅಭಿಮತ‌ ವ್ಯಕ್ತಪಡಿಸಿದರು.

ನಗರದ ಬಿಜೆಪಿ‌ ಚುನಾವಣಾ ಕಾರ್ಯಾಲಯದಲ್ಲಿ‌ ಹಮ್ಮಿಕೊಂಡಿದ್ದ ಭಗವಾನ್ ಮಹಾವೀರ‌ ಜಯಂತೋತ್ಸವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ದೇಶದಲ್ಲೇ ಅತಿ ಹೆಚ್ಚು ಶ್ರೀಮಂತಿಕೆ ಸಮಾಜವಾಗಿದ್ದರೂ ಜೈನರು ತಮ್ಮ ಶೇ. 70 ರಷ್ಟು ಆದಾಯವನ್ನು ಸಮಾಜಕ್ಕೆ ಅರ್ಪಿಸುವ ಹೃದಯಶ್ರೀಮಂತಿಕೆ ಹೊಂದಿದವರು. ದೇಶದಲ್ಲೇ ಅತಿ ಹೆಚ್ಚು ಗೋಶಾಲೆ ಹೊಂದಿರುವ ಜೈನ್ ಸಮಾಜದೊಂದಿಗೆ ನಾವೆಲ್ಲಾ ಸಹೋದರತ್ವದಂತೆ ಬದುಕು ನಡೆಸುತ್ತಾ ಆ ಸಮುದಾಯಕ್ಕೂ ಬಿಜೆಪಿ ರಾಜಕೀಯ ಪ್ರಾತಿನಿಧ್ಯ ನೀಡಲಿದೆ ಎಂದರು.

ಬಿಜೆಪಿ ಅಲ್ಪಸಂಖ್ಯಾತ ಮೊರ್ಚಾದ ಜಿಲ್ಲಾಧ್ಯಕ್ಷ
ಶೀತಲ್‌ಕುಮಾರ ಓಗಿ ಪ್ರಸ್ತಾವಿಕವಾಗಿ ಮಾತನಾಡಿ, ಬಸವಣ್ಣನರು ಸಮಾಜದಲ್ಲಿ ಸಮಾನತೆ ಸಾರಲು ಕಲ್ಯಾಣ ಕರ್ನಾಟಕ ನಿರ್ಮಿಸಿದಂತೆ, ಭಗವಾನ್ ಮಹಾವೀರರು ಬಿಹಾರವನ್ನು ಕಲ್ಯಾಣ ಬಿಹಾರ ಮಾಡಿದರು. ಅವರು ರಾಜರ ಮಗನಾದರೂ ಎಲ್ಲವನ್ನು ತ್ಯಜಿಸಿ ಸಮಾಜಕ್ಕೆ ತಮ್ಮನ್ನು ಸಮರ್ಪಿಸಿಕೊಂಡರು, ಎಲ್ಲರೂ ಯಾವುದೇ ಬೇಧಭಾವಗಳಿಲ್ಲದೇ ಬದುಕು ಸಾಗಿಸಬೇಕೆಂಬುದು ಮಹಾವೀರರ ಸಂದೇಶ. ದೇಶದವನ್ನು ಶಾಂತಿಯ ವನವನ್ನಾಗಿ ಮಾಡಿದ ಮಹಾನ್ ಪುರುಷರು. ಬಿಜೆಪಿ ಕಚೇರಿಯಲ್ಲಿ ಮಹಾವೀರ ಜಯಂತಿ‌ ಆಚರಣೆ ಮಾಡಿರುವುದು ಇಡಿ ಜೈನ್ ಸಮಾಜಕ್ಕೆ ಹರ್ಷವನ್ನುಂಟು ಮಾಡಿದೆ. ಸಂಸದರ ಚುನಾವಣೆಯ ಗೆದ್ದು ಸೋಲಿಲ್ಲದ ಸರದಾರರಾಗಿ ಉಳಿಯಲಿ, ಜಿಲ್ಲೆಯಲ್ಲಿ ಇನ್ನೂ‌ ಹೆಚ್ಚಿನ ಅಭಿವೃದ್ಧಿ ಕೆಲಸಗಳು ಅವರಿಂದಾಗಲು ಭಗವಾನ್ ಮಹಾವೀರರು ಆಶಿರ್ವದಿಸಲು ಎಂದು ಪ್ರಾರ್ಥಿಸುತ್ತೇನೆ ಎಂದರು.

ಸಂಸದ ರಮೇಶ ಜಿಗಜಿಣಗಿ ಅವರು ಮಾತನಾಡಿ ಸರ್ವರಿಗೂ ಮಹಾವೀರ ಜಯಂತಿ ಶುಭಾಶಯ ಕೋರಿದರು.ಅಲ್ಪಸಂಖ್ಯಾತರ ಮೊರ್ಚಾದ ನಗರ ಮಂಡಲ ಅಧ್ಯಕ್ಷ ಸಂತೋಷ ಕವಟೆಕರ ಹಿತನುಡಿಗಳಾಡಿದರು.

ಈ ವೇಳೆ ಬಿಜೆಪಿ ಮುಖಂಡ ಕಾಸೂಗೌಡ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ರಾವೂರ, ಸಾಬೂ ಮಾಶ್ಯಾಳ, ಮಳುಗೌಡ ಪಾಟೀಲ್, ಮಹಿಳಾ ಮೊರ್ಚಾದ ಜಿಲ್ಲಾಧ್ಯಕ್ಷೆ ಸ್ವಪ್ನಾ ಕಣಮುಚನಾಳ, ನಗರ ಮಂಡಲ‌ ಅಧ್ಯಕ್ಷ ಶಂಕರ ಹೂಗಾರ, ಬಿಜೆಪಿ ಮುಖಂಡ ಕೃಷ್ಣಾ ಗುನ್ಹಾಲಕರ ಹಾಗೂ ಇತರರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು