ವಿಜಯಪುರ: ಸಂಸದ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಏ. 26 ರಂದು ವಿಜಯಪುರ ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಪ್ರಚಾರ ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ಕಾರ್ಯಕ್ರಮ ನಡೆಯಲಿರುವ ಬಿ.ಎಲ್.ಡಿ.ಇ. ಹೊಸ ಕ್ಯಾಂಪಸ್ಗೆ ತೆರಳಿ ಮಂಗಳವಾರ ಸಂಜೆ ತಯಾರಿ ಪರಿಶೀಲನೆ ನಡೆಸಿದರು.
ಏ. 26 ರಂದು ಬೆಳಿಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಅವರೊಂದಿಗೆ ಸಿಎಂ ಎಸ್. ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿರಲಿದ್ದಾರೆ.
ತಯಾರಿ ವೀಕ್ಷಣೆ ಸಂದರ್ಭ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಎಸ್ಪಿ ರಿಷಿಕೇಷ ಸೋನಾವಣೆ, ನಗರ ಡಿವೈಎಸ್ಪಿ ಬಸವರಾಜ ಯಲಿಗಾರ, ಗೋಳಗುಮ್ಮಟ ಸಿಪಿಐ ಮಲ್ಲಯ್ಯ ಮಠಪತಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು ಮುಜುಮದಾರ ಮುಂತಾದವರು ಉಪಸ್ಥಿತರಿದ್ದರು.