ವಿಜಯಪುರ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸದ ವಿಚಾರವಾಗಿ ಭಾರೀ ಚರ್ಚೆಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆಗುತ್ತಿದ್ದು, ಇದೀಗ ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.
ಆಂಜನೇಯ ಅವರ ಹೇಳಿಕೆ ಸಂಬಂಧ ವಿಜಯಪುರ ನಗರದ ಸೈನಿಕ ಶಾಲಾ ಆವರಣದಲ್ಲಿರುವ ಹೆಲಿಪ್ಯಾಡ್ನಲ್ಲಿ ಮಾತನಾಡಿದ ಅವರು, ಆಂಜನೇಯಗೆ ಸದ್ಬುದ್ಧಿ ಬರಲಿ. ಯಾವ ರಾಜ್ಯದ ಬಿಜೆಪಿ ಸಿಎಂಗೂ ಕರೆದಿಲ್ಲ. ನಾನು ಭಾರತ ಸರ್ಕಾರ ಮಂತ್ರಿ ನನ್ನನ್ನು ಕರೆದಿಲ್ಲ. ನನಗೆ ಕರೆಯೋದಲ್ಲ ಬರಬೇಡಿ ಅಂತ ಹೇಳಿದ್ದಾರೆ. ಅಲ್ಲಿ ಜಾಗ ಇಲ್ಲ, ಅಲ್ಲಿನ ವ್ಯವಸ್ಥೆ ಸೀಮಿತವಾಗಿದೆ. ಯಾರನ್ನ ಕರೆಯಬೇಕು, ಕರೆಯಬಾರದು ಅನ್ನೋದು ಶ್ರೀ ರಾಮ ಮಂದಿರ ಕಮಿಟಿಯ ಸ್ವತಂತ್ರ ನಿರ್ಧಾರವಾಗಿರುತ್ತದೆ. ಹೀಗಾಗಿ ರಾಮಮಂದಿರ ಉದ್ಘಾಟನೆಗೆ ಸಿದ್ದರಾಮಯ್ಯಗೆ ಆಹ್ವಾನ ನೀಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ರಾಮಮಂದಿರ ಆಗಬೇಕು ಅನ್ನೋದು ಇರಲಿಲ್ಲ. ಆಗುತ್ತೆ ಅನ್ನೋ ಕಲ್ಪನೆ ಇರಲಿಲ್ಲ. ಇಚ್ಛೆನೂ ಅವರಿಗೆ ಇರಲಿಲ್ಲ. ಹಾಗಾಗಿ ಒಂದು ರೀತಿಯ ಆತಂಕ ಹೊಟ್ಟೆ ಕಿಚ್ಚು ಆರಂಭವಾಗಿದೆ. ಅದರ ಪರಿಣಾಮ ಉದ್ಘಾಟನೆಗೆ ಹೋಗಬೇಕೋ ಹೋಗಬಾರದೋ ಅನ್ನೋದು ಕನ್ಫ್ಯೂಷನ್. ನಾ ಹೋಗೋದಿಲ್ಲ ಅಂತ ಕೆಲವರು ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.