ವಿಜಯಪುರ: ಇಂದು ಬೆಳ್ಳಂಬೆಳಗ್ಗೆ ಗುಮ್ಮಟನಗರಿ ವಿಜಯಪುರ ಜಿಲ್ಲೆಯಾದ್ಯಂತ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವವಾಗಿದೆ. 3 ರಿಂದ 4 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದೆ.
ವಿಜಯಪುರದ ನಗರದ ರೇಲ್ವೆ ಸ್ಟೇಷನ್ ಏರಿಯಾ, ಗೋಳಗುಮ್ಮ ಏರಿಯಾ, ಗ್ಯಾಂಗಬಾವಡಿ ಸೇರಿದಂತೆ ಹಲವು ಕಡೆಗಳಲ್ಲಿ ಭೂಮಿ ಕಂಪಿಸಿದೆ. ಕಳೆದ ಮೂವತ್ತು ವರ್ಷದ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಸದ್ದು ಆಗಿರಲಿಲ್ಲ ಎಂದು ಹೇಳಲಾಗುತ್ತಿದೆ.
ವಿಜಯಪುರ ನಗರ ಕೇಂದ್ರದಲ್ಲಿ ಮಾತ್ರವಲ್ಲದೆ, ಜಿಲ್ಲೆಯಾದ್ಯಂತ ಹಲವೆಡೆ ಭೂಕಂಪನ ಅನುಭವವಾಗಿದೆ. ವಿಜಯಪುರ, ತಿಕೋಟಾ, ಬಬಲೇಶ್ವರ, ಇಂಡಿ ಹಾಗೂ ಚಡಚಣ ತಾಲೂಕುಗಳು ಸೇರಿದಂತೆ ಜಿಲ್ಲೆಯ ಬಹುತೇಕ ಭಾಗದಲ್ಲಿ ಭೂಮಿ ನಡುಗಿದೆ.