ಚಡಚಣ: ಗುಡಿಸಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ಪಟ್ಟಣದ ಹೊರವಲಯದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಕರೀಮಸಾಬ ಇಮಾಮಸಾಬ ಟಪಾಲ 82, ಸಾಜನಬಿ ಕರೀಮಸಾಬ ಟಪಾಲ ಮೃತಪಟ್ಟಿರುವ ದುರ್ದೈವಿಗಳು.
ಗುಡಿಸಲಿನಲ್ಲಿ ಮಲಗಿದ ವೇಳೆ ಚಿಮಣಿಯಿಂದ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಗುಡಿಸಲು ಸುಟ್ಟು ಭಸ್ಮವಾಗಿದೆ. ಇದರಿಂದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.