ವಿಜಯಪುರ: ಉತ್ತರ ಕರ್ನಾಟಕ ಭಾಗದ ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ 52 ಭೂಕಂಪಗಳು ಸಂಭವಿಸಿವೆ. ರಾಜ್ಯ ವಿಧಾನ ಪರಿಷತ್ತಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಈ ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ.
ಕಾಂಗ್ರೆಸ್ ನ ಸುನೀಲ್ ಗೌಡ ಪಾಟೀಲ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಶೋಕ್, ಈ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಳ ಮತ್ತು ಅತಿವೃಷ್ಟಿ ಘಟನೆಗಳು ಪದೇ ಪದೇ ಕಂಪನಕ್ಕೆ ಕಾರಣವಾಗುತ್ತಿವೆ ಎಂದು ಹೇಳಿದರು.
ತಜ್ಞರು ಈ ಪ್ರದೇಶದಲ್ಲಿ ಅಧ್ಯಯನ ನಡೆಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಸಮುದಾಯಗಳಲ್ಲಿನ ತಜ್ಞರಿಂದ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ವಿಜಯಪುರದಲ್ಲಿ, ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಕಂಪನದ ಬಗ್ಗೆ ಜನರು ಪದೇ ಪದೇ ದೂರು ನೀಡುವುದನ್ನು ಇಲ್ಲಿ ಸ್ಮರಿಸಬಹುದು.