ವಿಜಯಪುರ: ವಿಜಯಪುರ ಜಿಲ್ಲೆಯು ಮಾರ್ಚ್-2022 ಮಾಸಿಕದಲ್ಲಿ ಅತಿ ಹೆಚ್ಚು ನಾಗರಿಕರಿಗೆ ಗ್ರಾಮ ಒನ್ ಕೇಂದ್ರಗಳಿಂದ ಸೇವೆಯನ್ನು ಒದಗಿಸುವ ಮೂಲಕ ವಿಶಿಷ್ಟ ಸಾಧನೆಗೈದಿರುವುದನ್ನು ಪರಿಗಣಿಸಿ, ವಿಜಯಪುರ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ಬಿ. ದಾನಮ್ಮನವರ ಅವರಿಗೆ ಮುಖ್ಯಮಂತ್ರಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಮ್ಮಿಕೊಂಡ ಗ್ರಾಮ ಒನ್ ಯೋಜನೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಮಹಾಂತೇಶ ದಾನಮ್ಮನವರ ಅವರು ಮುಖ್ಯಮಂತ್ರಿಗಳಿಂದ ಪ್ರಶಂಸನಾ ಪತ್ರ ಹಾಗೂ ಒಂದು ಲಕ್ಷ ರೂ. ಚೆಕ್ನ್ನು ಸ್ವೀಕರಿಸಿದರು.
ಜಿಲ್ಲೆಯಲ್ಲಿ 291 ಗ್ರಾಮ ಒನ್ ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 13 ಲಕ್ಷ ಅರ್ಜಿಗಳನ್ನು ಸ್ವೀಕರಿಸಿ ನಾಗರಿಕರಿಗೆ ನಾನಾ ಸೇವೆಗಳನ್ನು ಈ ಕೇಂದ್ರಗಳ ಮೂಲಕ ಒದಗಿಸಿರುವ ಹಿನ್ನೆಲೆಯಲ್ಲಿ ಈ ಪ್ರಶಂಸಾ ಪತ್ರ ನೀಡಲಾಗಿದೆ.