News Karnataka Kannada
Sunday, May 12 2024
ವಿಜಯಪುರ

ವಿಜಯಪುರ: ಅಪ್ರಾಪ್ತ ಮಗಳು ಯುವಕನೊಂದಿಗೆ ಪರಾರಿ, ಮನನೊಂದ ತಂದೆ ಆತ್ಮಹತ್ಯೆ

Five die in Thane hospital in a single day
Photo Credit : Pixabay

ವಿಜಯಪುರ: ಬಸವನಬಾಗೇವಾಡಿ ತಾಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಪ್ರಾಪ್ತ ಮಗಳು ತನ್ನ ಪ್ರಿಯಕರನ ಜೊತೆ ಪರಾರಿಯಾಗಿದ್ದು, ದೂರು ನೀಡಿದರೂ ಪೊಲೀಸರು ಮಗಳನ್ನು ಪತ್ತೆ ಮಾಡುತ್ತಿಲ್ಲ ಎಂದು ನೊಂದ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ದುರ್ದೈವಿ ಬಸವನಬಾಗೇವಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಗಂಗಾಧರ ಬಡಿಗೇರ (44).  ಇವರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರಾಗಿದ್ದರು. ತಮ್ಮ ಅಪ್ರಾಪ್ತ ಮಗಳು ಪ್ರಿಯಕರನೊಂದಿಗೆ ಪರಾರಿಯಾಗಿದ್ದು, ತನ್ನ ಮಗಳನ್ನು ಪತ್ತೆ ಮಾಡಿ ಕೊಡುವಂತೆ ಗಂಗಾಧರ ಬಸವನಬಾಗೇವಾಡಿ ಪೊಲೀಸರಿಗೆ ದೂರು ನೀಡಿದ್ದರು. ಆದರೂ ಪೊಲೀಸರು ತನ್ನ ಮಗಳನ್ನು ಪತ್ತೆ ಮಾಡಿಲ್ಲವೆಂದು ಮನನೊಂದು ಭೈರವಾಡಗಿ ಹೊರ ವಲಯದಲ್ಲಿರುವ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತನ್ನ ಅಪ್ರಾಪ್ತ ಮಗಳು ಸ್ವಗ್ರಾಮದ ಯುವಕನೊಂದಿಗೆ  ಮನೆ ಬಿಟ್ಟು ಹೋಗಿದ್ದಳು. ತಾನು ಎಷ್ಟೆಲ್ಲ ಹುಡುಕಿದರೂ ಮಗಳು ಪತ್ತೆ ಆಗಿರಲಿಲ್ಲ. ಬಸವನಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದರೂ ಪೊಲೀಸರು ನನ್ನ ಮಗಳನ್ನು ಹುಡುಕುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಗಂಗಾಧರ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು