News Karnataka Kannada
Friday, May 03 2024
ವಿಜಯಪುರ

ವಿಜಯಪುರ: ಟಿಕೆಟ್ ನಿರಾಕರಣೆ, ಪಕ್ಷದ ಆದೇಶ ಪಾಲಿಸಲು ಗೋಪಾಲ ಕಾರಜೋಳ ನಿರ್ಧಾರ

Gopal Karjol refuses ticket, decides to abide by party's order
Photo Credit : By Author

ವಿಜಯಪುರ: ನಾಗಠಾಣ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋಪಾಲ ಕಾರಜೋಳ ಕೊನೆಗೂ ಪಕ್ಷದ ನಿರ್ಧಾರಕ್ಕೆ ಬದ್ಧರಾಗಲು ನಿರ್ಧರಿಸಿದ್ದಾರೆ.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳರ ಪುತ್ರ ಗೋಪಾಲ್ ಅವರು ಟಿಕೆಟ್ ಬಯಸಿದ್ದರು, ಆದರೆ ಪಕ್ಷವು ಕೊನೆಯ ಕ್ಷಣದಲ್ಲಿ ಸಂಜೀವ್ ಐಹೊಳೆ ಅವರಿಗೆ ಟಿಕೆಟ್‌ ನೀಡಿದೆ.

ಗೋಪಾಲ್ ಅಂತಿಮ ನಿರ್ಧಾರ ತೆಗೆದುಕೊಳ್ಳಲು ತಮ್ಮ ಬೆಂಬಲಿಗರ ಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಗೋಪಾಲ್ ಕಾರಜೋಳ ಅವರು ಸ್ವತಂತ್ರ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂಬ  ಅಭಿಪ್ರಾಯ  ಕೇಳಿಬಂದಿತ್ತು. ಗೋಪಾಲ್ ಅವರು 2018 ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಅಲ್ಲದೆ ಅಲ್ಪ ಮತಗಳ ಅಂತರದಿಂದ ಸೋತಿದ್ದರಿಂದ ಗೋಪಾಲ್ ಅವರಿಗೆ ಮತ್ತೆ ಟಿಕೆಟ್ ಸಿಗುವ ವಿಶ್ವಾಸವಿತ್ತು. ಟಿಕೆಟ್ ನಿರಾಕರಿಸಿದ ನಂತರ, ಗೋಪಾಲ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೆಂದು ಬೆಂಬಲಿಗರು ಬಯಸಿದ್ದರು.  ಆದರೆ ಗೋಪಾಲ್‌ ಪಕ್ಷದ ನಿರ್ಧಾರಕ್ಕೆ ತಲೆಬಾಗಿರುವುದಾಗಿ ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
29734
Firoz Rozindar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು