ವಿಜಯಪುರ: ಪ್ರತಿ ಪ್ರಜೆಯು ಮತದಾನ ಮಾಡುವುದು ಸಂವಿಧಾನ ಕಲ್ಪಿಸಿಕೊಟ್ಟಿರುವ ಹಕ್ಕು. ಬರುವ ಮೇ-10ರ ಮತದಾನ ದಿನದಂದು ಎಲ್ಲರೂ ಪಾಲ್ಗೊಂಡು ಮತದಾನ ಮಾಡಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ.ಬಿ ಕುಂಬಾರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಮಹಾ ನಗರಪಾಲಿಕೆ ಸಹಯೋಗದಲ್ಲಿ ಸ್ವೀಪ್ ಕಾರ್ಯಕ್ರಮದಡಿ ಮಂಗಳವಾರ ನಗರದ ಶಂಕರಲಿಂಗ ದೇವಸ್ಥಾನ ಜೋರಾಪುರ ಪೇಠದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಮಹಿಳೆಯರಿಗಾಗಿ ಆಯೋಜಿಸಿದ್ದ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮತದಾನದಿಂದ ಯಾರೂ ವಂಚಿತರಾಗಬಾರದು. ಮತದಾರರು ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ತಮ್ಮ ಹಕ್ಕು ಚಲಾಯಿಸಬೇಕು. ಕುಟುಂಬದ ಸದಸ್ಯರೆಲ್ಲರೂ ಮತದಾನ ಮಾಡುವುದರೊಂದಿಗೆ ನೆರೆಹೊರೆಯವರಿಗೆ ಮತದಾನದ ಮಹತ್ವದ ಕುರಿತು ಮನವರಿಕೆ ಮಾಡಿಕೊಟ್ಟು, ಮತದಾನ ಮಾಡಲು ಪ್ರೇರಣೆ ನೀಡಬೇಕು ತಿಳಿಸಿದರು.
ಮಹಾನಗರ ಪಾಲಿಕೆ ವಿಜಯಪುರ ಉಪಆಯುಕ್ತರಾದ ಮಹಾವೀರ ಬೋರಣ್ಣ ಮಾತನಾಡಿ, ಪ್ರತಿಯೊಬ್ಬ ಮಹಿಳೆಯರು ಹಾಗೂ ಕುಟುಂಬದ ಎಲ್ಲ ಸದಸ್ಯರು ಮತದಾನ ಮಾಡಲೇಬೇಕು. ಸ್ವಸಹಾಯ ಸಂಘದ ಎಲ್ಲ ಮಹಿಳೆಯರು ಮತದಾರರಿಗೆ ಮತ ಚಲಾಯಿಸಲು ಪ್ರೇರೆಪಿಸಬೇಕೆಂದು ಹೇಳಿದರು.
ಜಿಲ್ಲಾಕೌಶಲ್ಯ ಮಿಷನ್ ನ ಅಭಿಯಾನ ವ್ಯವಸ್ಥಾಪಕರಾದ ಸುನಂದಾ ಜಿ. ಬಾಲಪನ್ ಮಾತನಾಡಿ, ನಮ್ಮ ದೇಶದ 18 ವರ್ಷ ಮೇಲ್ಪಟ್ಟ ಎಲ್ಲ ಪ್ರಜೆಗಳಿಗೂ ಮತದಾನ ಮಾಡುವ ಮತಾಧಿಕಾರವಿದೆ. ಎಲ್ಲ ಮಹಿಳೆಯರು ಮತದಾನ ಮಾಡುವುದರೊಂದಿಗೆ ಮತದಾನದ ಮಹತ್ವದ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಬೇಕು.
ಇದಕ್ಕೂ ಮೊದಲು ಮತದಾನ ಜಾಗೃತಿ ಹಾಗೂ ಜಾಥಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಪಾಲಿಕೆಯ ಉಪ ಆಯುಕ್ತರಾದ ಎಸ್.ಎ ಮಹಾಜನ, ವಲಯ ಆಯುಕ್ತರಾದ ದೇವಿಂದ್ರ ಧನಪಾಲ, ಕಂದಾಯ ಅಧಿಕಾರಿಗಳಾದ ಕೆ. ಎ. ಲೈನ್, ಮಲ್ಲನಗೌಡ ಬಿರಾದಾರ, ರವೀಂದ್ರ ಶಿರಶ್ಯಾಡ ಸಮುದಾಯ ಸಂಘಟಿಕರಾದ ಸಾವಿತ್ರಿ ತಿಪ್ಪಣ್ಣವರ, ಭಾರತಿ ಕವಲಗಿ ಹಾಗೂ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಶ್ವೇತಾ, ಮನೀಷಾ, ಮಮತಾ ಉಪಸ್ಥಿರಿದ್ದರು.
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.
ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾದ ಮೊದಲ ಬ್ಯಾಚ್…
ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್ರಿಂದ…
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…