ವಿಜಯಪುರ: ಮತಕ್ಷೇತ್ರದಲ್ಲಿ ಯಾರು ಅಭಿವೃದ್ಧಿ ಪರ, ರೈತರ ಪರ ಬಡವರ ಪರ ಕೆಲಸ ಕಾರ್ಯಗಳು ಮಾಡಿದ್ದಾರೊ ಅವರಿಗೆ ನಿಮ್ಮ ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಎಂದು ಬಹಿರಂಗ ಸಭೆಯಲ್ಲಿ ಉದ್ದೇಶಿಸಿ ಮಾತನಾಡಿದ ಉತ್ತರಪ್ರದೇಶದ ಮುಖ್ಯಮಂತ್ರಿಯಾದ ಶ್ರೀ ಯೋಗಿ ಆದಿತ್ಯನಾಥ ಹೇಳಿದರು.
ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಮಾಡಿದ್ದು ನಮ್ಮ ಸರ್ಕಾರ, ಮುಸ್ಲಿಂ ಅಲ್ಪಸಂಖ್ಯಾತ ಮೀಸಲಾತಿಯನ್ನು ರದ್ದು ಮಾಡಿದ್ದು ನಮ್ಮ ಡಬಲ್ ಇಂಜಿನ್ ಸರ್ಕಾರ ಇದು ಹಿಂದೂ ರಾಷ್ಟ್ರ ಹಿಂದುತ್ವ ಸರ್ಕಾರ ಮತ್ತೆ ಕರ್ನಾಟಕದಲ್ಲಿ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸುವಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಭಗವಂತ ಕಾರಾಡೆ ಹಾಗೂ ಉತ್ತರಖಂಡದ ಸಚಿವರಾದ ಧನಸಿಂಗ ರಾವತ
ಅನೇಕ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು