News Karnataka Kannada
Tuesday, April 30 2024
ವಿಜಯಪುರ

ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳಿಗಾಗಿ ಮತ ನೀಡಿ: ಎಂ.ಬಿ. ಪಾಟೀಲ

ಬಿಜೆಪಿ ಮತ್ತು ಕಾಂಗ್ರೆಸ್‌ನ ಕೆಲಸಗಳನ್ನು ಗಮನಕ್ಕೆ ತೆಗೆದುಕೊಂಡು ಮತ ನೀಡಿ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.
Photo Credit : NewsKarnataka

ವಿಜಯಪುರ: ಬಿಜೆಪಿ ಮತ್ತು ಕಾಂಗ್ರೆಸ್‌ನ ಕೆಲಸಗಳನ್ನು ಗಮನಕ್ಕೆ ತೆಗೆದುಕೊಂಡು ಮತ ನೀಡಿ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

ನಗರದ ಮಠಪತಿ ಗಲ್ಲಿಯಲ್ಲಿ ಭಾನುವಾರ ಸಂಜೆ ನಡೆದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿಯ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟದ ನಂತರ ದೇಶವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಹಸಿರು ಕ್ರಾಂತಿ, ಉದ್ಯೋಗ, ಉದ್ಯಮ ಸ್ಥಾಪಿಸಿದ್ದು, ದೊಡ್ಡ ದೊಡ್ಡ ಸಂಸ್ಥೆಗಳನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಮೋದಿಯವರು ಬಂದ ಮೇಲೆ ಎಲ್ಲ ಆಗಿದೆ ಎನ್ನುವವರು ಒಂದು ಡ್ಯಾಂ ಕಟ್ಟಲಿಲ್ಲ. ಕಾಂಗ್ರೆಸ್ ಎರಡು ಸಾವಿರ ಅಣೆಕಟ್ಟುಗಳ ಪೈಕಿ ಸಾವಿರದ ಒಂಬೈನೂರು ಡ್ಯಾಂ ಕಟ್ಟಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎಂದು ಹೇಳಿದರು.

ಏಳು ವರ್ಷದಲ್ಲಿ ದೇಶ ಬದಲಿಸುತ್ತೇವೆ ಎಂದವರು ಎಲ್ಲದರ ಬೆಲೆ ಏರಿಸಿದರು, ಜಿಎಸ್‌ಟಿ, ನೋಟ್ ಬ್ಯಾನ್‌ನಂತಹ ಕ್ರಮಗಳಿಂದ ಅರ್ಥಿಕ ಸಂಕಷ್ಟ ತಂದರು. ಆದರೂ ಭ್ರಮೆಗಳನ್ನು ಸೃಷ್ಟಿಸಿ, ಭಾವನೆಗಳನ್ನು ಕೆರಳಿಸಿ ಬಿಜೆಪಿಯವರು ಮತ ಕೇಳುತ್ತಾರೆ. ಕಾಂಗ್ರೆಸ್ ನಿಮ್ಮ ಭವಿಷ್ಯ ರೂಪಿಸುವ ಪಕ್ಷ. ನಿಮ್ಮ ಜೀವನ ಸುಧಾರಿಸುವ ಪಕ್ಷ. ಹಾಗಾಗಿ ಈಗ ಲೋಕಸಭೆಯ ನಮ್ಮ ಅಭ್ಯರ್ಥಿಗೆ ಮತ ನೀಡಿದರೆ ಮತ್ತಷ್ಟು ಅಭಿವೃದ್ಧಿ ಸಾಧ್ಯ ಎಂದರು.

ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಮಾತನಾಡಿ, ಮೂರು ಬಾರಿ ಆಯ್ಕೆಯಾದ ಈ ಹಿಂದಿನ ಸಂಸದರು ಯಾವ ಕೆಲಸ ಮಾಡಿಲ್ಲ. ಅವರು ನಮ್ಮ ದನಿಯಾಗಿ ಇರಲಿಲ್ಲ. ಒಂದು ದಿನವೂ ಚಕಾರ ಎತ್ತಲಿಲ್ಲ. ಆಲಗೂರರು ಭಾಷಾ ಪ್ರವೀಣ ಹಾಗೂ ವಿದ್ಯಾವಂತರಾಗಿದ್ದಾರೆ. ಲೋಕಸಭೆಯಲ್ಲಿ ಜಿಲ್ಲೆಯ ಪರ ಹೋರಾಟ ಮಾಡಲಿದ್ದಾರೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು ಮಾತನಾಡಿ, ಸಚಿವ ಎಂ.ಬಿ.ಪಾಟೀಲರು ಮಾಡಿದ ನೀರಾವರಿ ಕಾರ್ಯ, ರಾಜ್ಯ ಸರಕಾರದ ಜನೋಪಕಾರಿ ಯೋಜನೆಗಳಿಂದ ನಮಗೆ ಮತ ಕೇಳುವ ನೈತಿಕತೆ ಇದೆ. ಬಿಜೆಪಿಯವರು ಮಾಡಿದ್ದಕ್ಕಿಂತ ಹೇಳಿದ್ದು ಹೆಚ್ಚು. ಜಿಗಜಿಣಗಿಯವರು ಯಾವ ಅಭಿವೃದ್ಧಿ ಮಾಡಲಿಲ್ಲ. ತಮಗೆ ಅವಕಾಶ ನೀಡಿದರೆ ಜಿಲ್ಲೆಯ ಏಳ್ಗೆಗೆ, ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಸದಸ್ಯ ಅಶೋಕ ನ್ಯಾಮಗೊಂಡ ಪ್ರಸ್ತಾವಿಕ ಮಾತನಾಡಿದರು. ಮುಖಂಡರಾದ ಸಿದ್ದಪ್ಪ ಸಜ್ಜನ, ಅಡಿವೆಪ್ಪ ಸಾಲಗಲ್, ರವೀಂದ್ರ ಬಿಜ್ಜರಗಿ, ಪ್ರಾಧಿಕಾರದ ಸದಸ್ಯ ಸಂತೋಷ ಪವಾರ, ಜಬ್ವಾರ ಮೇಸ್ತ್ರಿ, ಟಪಾಲ ಇಂಜಿನಿಯರ್, ಶಿವಾನಂದ ಜಂಗಮಶೆಟ್ಟಿ, ಗಂಗಾಧರ ಸಂಬಣ್ಣಿ, ರಾಘು ಕಲಾಲ, ಬಂಡು ಕಾಳೆ, ನೂರುಲ್ ಹಸನ್, ಶಿವಾನಂದ ಮದಭಾವಿ, ಇಕ್ಲಾಸ್ ಸುನ್ನೇವಾಲೆ, ಬಂಡು ಕಾಳೆ, ಆಸೀಮ್ ಜಾನ್ವೇಕರ್, ಮಹಾದೇವ ಪವಾರ, ಆಸಿಮ್ ಜಾವಡೇಕರ, ನಾರಾಯಣ ಶಾಸ್ತ್ರಿ, ಚಿದಾನಂದ ಆಲಗೊಂಡ ಅನೇಕರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು