ಬೆಂಗಳೂರು: ಅಕ್ರಮವಾಗಿ ದನಗಳ ಸಾಗಾಣೆ ಮಾಡುತ್ತಿದ್ದ ವಾಹನ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ದ್ಯಾಪನಹಳ್ಳಿ ಗ್ರಾಮದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ 50 ಕರುಗಳು ಮೃತಪಟ್ಟಿದೆ.
ಈ ಘಟನೆ ಗುರುವಾರ ಮುಂಜಾನೆ ನಡೆದಿದೆ.ಸ್ಥಳೀಯ ಶಾಸಕ ಕೆ.ಎಸ್.ಲಿಂಗೇಶ್ ಸ್ಥಳಕ್ಕೆ ಭೇಟಿ ನೀಡಿದರು.
ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಪಶು ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು.
ಆ ಗಾಯಗೊಂಡ ಕರುಗಳಿಗೆ ಚಿಕಿತ್ಸೆ ನೀಡಿ ವಿವಿಧ ಗೋಶಾಲೆಗೆ ಕಳುಹಿಸಲಾಗುತ್ತಿದೆ.
ಮೂಲಗಳ ಪ್ರಕಾರ, ಈ ಕರುಗಳನ್ನು ಅಕ್ರಮವಾಗಿ ಕಸಾಯಿಖಾನೆಗಳಿಗೆ ಸಾಗಿಸಲಾಗುತ್ತಿತ್ತು.