News Karnataka Kannada
Monday, May 06 2024
ಬೆಂಗಳೂರು

ಅತ್ಯಾಚಾರ ಪ್ರಕರಣಗಳಲ್ಲಿ ಮಾತಾಡುವಾಗ ಹುಷಾರು : ಸಿಎಂ ಸಲಹೆ

Basavaraj Bommaih V Ponnuraj 01082021
Photo Credit :

ಬೆಂಗಳೂರು : ಅತ್ಯಾಚಾರದಂತಹ ಸೂಕ್ಷ್ಮ  ವಿಷಯದಲ್ಲಿ ಎಚ್ಚರಿಕೆಯಿಂದ ಮಾತನಾಡಿ ಎಂದು ಸಂಪುಟ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದ್ದಾರೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರ. ಹೀಗಾಗಿ ಈ ಪ್ರಕರಣದ ಬಗ್ಗೆ ಮಾತಾಡುವಾಗ ಎಚ್ಚರವಿರಲಿ.  ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ.  ಈ ರೀತಿ ಘಟನೆ ಆದಾಗ ವಿಪಕ್ಷದವರು ಟೀಕೆ ಮಾಡೋದು ಸಹಜ. ಹಾಗಂತ ಏನೋ ಮಾತಾಡಿ, ಗೊಂದಲ ಮಾಡ್ಕೊಳ್ಳೋದು ಬೇಡ. ಅತ್ಯಾಚಾರ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ ಎಂದು ಹೇಳಿದ್ದಾರೆ.

ನಿಮ್ಮ ಇಲಾಖೆಯ ಅಧಿಕಾರಿಗಳ ಜೊತೆಯಲ್ಲಿದ್ದು, ಪ್ರಕರಣದ ವಿವರ ಪಡೆಯಿರಿ. ಅನಾವಶ್ಯಕವಾಗಿ ಮಾತಾಡಿ ಗೊಂದಲಕ್ಕೀಡಾಗಬೇಡಿ. ಈಗಾಗಲೇ ಗೃಹ ಸಚಿವರು ಸ್ಥಳಕ್ಕೆ ಹೋಗಿದ್ದಾರೆ. ನೀವು ಕೂಡ ಹೋಗಿ ಎಂದು  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್​ಗೆ ಸಿಎಂ ಸೂಚನೆ ನೀಡಿದರು. ಸಿಎಂ ಸೂಚನೆ ಹಿನ್ನೆಲೆ ಇದೀಗ ಹಾಲಪ್ಪ ಆಚಾರ್ ಮೈಸೂರಿಗೆ ತೆರಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು