News Karnataka Kannada
Friday, May 03 2024
ಬೆಂಗಳೂರು

ಆಭರಣ ಕ್ಷೇತ್ರದ ಹೂಡಿಕೆದಾರರಿಗೆ ಸಂಪೂರ್ಣ ಸಹಕಾರ : ಸಚಿವ ನಿರಾಣಿ

Nirani 25072021
Photo Credit :

ಬೆಂಗಳೂರು : ರಾಜ್ಯದಲ್ಲಿ ಆಭರಣ ವಲಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ಹಾಗೂ ತೆರಿಗೆ  ವಿನಾಯ್ತಿಯನ್ನು ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪ್ರಕಟಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಇಂದು  ಆರಂಭವಾಗಿರುವ ಅಂತಾರಾಷ್ಟ್ರೀಯ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಭರಣ ವಲಯದಲ್ಲಿ ಯಾರೇ ಉದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದರೆ ನಮ್ಮ ಸರ್ಕಾರ ಸಂಪೂರ್ಣವಾಗಿ ಸಹಕಾರ ಕೊಡಲಿದೆ. ಅಗತ್ಯವಾದ ನೆರವು ಜೊತೆಗೆ ರಿಯಾಯ್ತಿಯನ್ನು  ನೀಡಲಾಗುವುದು ಎಂದು ಘೋಷಿಸಿದರು.

ರಫ್ತು ಗುರಿ ಸಾಧಿಸುವಲ್ಲಿ ರತ್ನಗಳು ಮತ್ತು ಆಭರಣ ವಲಯವು  ಪ್ರಮುಖ ಪಾತ್ರವನ್ನು ವಹಿಸುತ್ತವೆ. ಬಂಡವಾಳ ಹೂಡಲು ಬರುವ ಉದ್ಯಮಿಗಳಿಗೆ ನಾವು ಮುಕ್ತ ಸ್ವಾಗತಕೋರಿ ಕೆಂಪು ರತ್ನಗಂಬಳಿ ಹಾಕುತ್ತೇವೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು