News Karnataka Kannada
Friday, May 03 2024
ಬೆಂಗಳೂರು

ಇಂಧನ, ರಸಗೊಬ್ಬರ ರಾಜ್ಯಕ್ಕೆ ಆದ್ಯತೆ: ಭಗವಂತ ಖೂಬಾ

Bhagantha Khuba 14082021
Photo Credit :

ಬೆಂಗಳೂರು: ಇಂಧನ ಮತ್ತು ರಸಗೊಬ್ಬರ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವೇ ತಿಂಗಳಲ್ಲಿ ಹೊಸ ರಸಗೊಬ್ಬರ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿವೆ. ಯೂರಿಯಾ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಸಾಧಿಸಲಿದೆ ಎಂದರು.

ಇಫ್ಕೋ ಕಂಪನಿಯು ಕರ್ನಾಟಕದಲ್ಲಿ ನ್ಯಾನೊ ಯೂರಿಯಾ ಉತ್ಪಾದನಾ ಘಟಕ ಆರಂಭಿಸಲು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ರಾಜ್ಯ ಸರ್ಕಾರ ಮೂಲಸೌಕರ್ಯ ನೀಡಿದ ಬಳಿಕ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು