ಬೆಂಗಳೂರು: ನನ್ನ ರಾಜಕೀಯ ಏಳಿಗೆ ಸಹಿಸದ ಮತ್ತು ನಾನು ಈ ಹಿಂದೆ ಇದ್ದ ಪಕ್ಷದವರೇ ನನ್ನ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ (ಇಡಿ) ದೂರು ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಜೆಡಿಎಸ್ ನಾಯಕರ ವಿರುದ್ದ ಹರಿಹಾಯ್ದರು.
ನಾನು ಯಾರ ಹೆಸರೂ ಹೇಳುವುದಿಲ್ಲ. ನಾನು ಇಷ್ಟು ಎತ್ತರಕ್ಕೆ ಬೆಳೆಯುತ್ತೇನೆ ಎಂದು ಅವರು ಭಾವಿಸಿರಲಿಲ್ಲ. ನನ್ನ ಏಳಿಗೆ ಸಹಿಸಲು ಆಗದೇ ದಾಳಿ ಮಾಡಿಸಿದ್ದಾರೆ ಎಂದು ಆರೋಪಿಸಿದರು.
ಇಂಥ ದಾಳಿಗಳಿಂದ ನನ್ನನ್ನು ಹೆದರಿಸಲು ಅಥವಾ ದುರ್ಬಲಗೊಳಿಸಲು ಸಾಧ್ಯವಿಲ್ಲ, ನನ್ನ ರಾಜಕೀಯ ಭವಿಷ್ಯವನ್ನೂ ಮುಗಿಸಲು ಸಾಧ್ಯವಿಲ್ಲ. ದಾಳಿಗೂ ಐಎಂಎ ಹಗರಣಕ್ಕೂ ಸಂಬಂಧವಿಲ್ಲ ಎಂದರು.
ನಾನು ಒಂದು ಒಳ್ಳೆಯ ಮನೆ ಕಟ್ಟಿಸಿರುವುದು ಅವರಿಗೆ ಸಹಿಸಲು ಆಗಲಿಲ್ಲ. ಅವರನ್ನು ಬಿಟ್ಟು ಬೇರೆ ಯಾರೂ ಮನೆ ಕಟ್ಟಬಾರದು ಎಂಬುದು ಅವರ ಉದ್ದೇಶ. ಹೀಗಾಗಿ, ನಾನು ಮನೆ ಕಟ್ಟಿದ ಮಾಹಿತಿಯನ್ನೇ ಮುಂದಿಟ್ಟುಕೊಂಡೇ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ಕೊಟ್ಟ ಕುಟುಂಬದವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…