ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಅವರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಕಿಡಿಕಾರಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯ ವೇಳೆ ಮಾತನಾಡಿದ ಅವರು, ಕೋವಿಡ್ 2ನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವಿಗೆ ಕಾರಣರಾಗಿದ್ದಕ್ಕೆ, ಸ್ವರ್ಗ ತೋರಿಸುತ್ತೇವೆ ಎಂದು ಅಧಿಕಾರಕ್ಕೆ ಬಂದು ಜನರಿಗೆ ನರಕ ತೋರಿಸುತ್ತಿರುವುದಕ್ಕೆ, ಕೇಂದ್ರದ ಮಲತಾಯಿ ಧೋರಣೆ, ರಾಜ್ಯಕ್ಕೆ ಬರಬೇಕಾದ ಅನುದಾನ ತರಲು ವಿಫಲರಾಗಿರುವುದಕ್ಕೆ, 2019ರಿಂದ ಆಗುತ್ತಿರುವ ನೆರೆಗೆ ಪರಿಹಾರ ನೀಡದಿರುವುದಕ್ಕೆ, ಜಿಎಸ್ಟಿ ಪಾಲು 13 ಸಾವಿರ ಕೋಟಿ ನೀಡದಿರುವುದಕ್ಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಬಿಜೆಪಿ ನಾಯಕರು ರಾಜ್ಯದ ಜನರ ಮುಂದೆ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಜನ ಬಿಜೆಪಿ ವಿರುದ್ಧ ಆಕ್ರೋಶದ ಯಾತ್ರೆ ನಡೆಸುತ್ತಾರೆ’ ಎಂದು ಎಚ್ಚರಿಸಿದರು.
ಇದು ಜನಾಶೀರ್ವಾದ ಅಲ್ಲ, ಜನರ ಕ್ಷಮೆ ಕೋರುವ ಯಾತ್ರೆ ಆಗಬೇಕು: ಸಲೀಂ ಅಹ್ಮದ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.