ಬೆಂಗಳೂರು : ರಾಜ್ಯ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಭೋದನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ.
ರಾಜ್ಯ ಸರ್ಕಾರ ಈಗಾಗಲೇ ಭಗವದ್ಗೀತೆ ಬೋಧನೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು, ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಬೋಧನೆ ಮಾಡಬೇಕು?
ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಸಮಿತಿ ಮಾಹಿತಿ ನೀಡಲಿದೆ.
ಶಿಕ್ಷಣ ಇಲಾಖೆಯು ಗುಜರಾತ್ ಮಾದರಿ ಫಾಲೋ ಮಾಡಲು ನಿರ್ಧರಿಸಿದೆ ಎನ್ನಲಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಭಗವದ್ಗೀತೆ ಭೋದನೆ ಮಾಡಲು ಮುಂದಾಗಿದೆ. ರಾಜ್ಯದ ಪ್ರಾಥಮಿಕ ಹಂತದ ಎಲ್ಲಾ ಶಾಲೆಗಳಲ್ಲಿ 6-12 ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆಗೆ ಪ್ಲಾನ್ ಮಾಡಿದೆ ಎಂದು ಹೇಳಲಾಗುತ್ತಿದೆ.