News Karnataka Kannada
Saturday, May 04 2024
ಬೆಂಗಳೂರು

ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಪಿಎಸ್ಐ ಅಭ್ಯರ್ಥಿಗಳು

Untitled 205
Photo Credit :

 ಬೆಂಗಳೂರು: ಪಿಎಸ್​ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದ, ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತಪಡಿರುವ ಪ್ರಾಮಾಣಿಕ ಪಿಎಸ್​ಐ ಅಭ್ಯರ್ಥಿಗಳು ನಮಗೆ ನ್ಯಾಯಬೇಕು ಯಾರೋ ಮಾಡಿರುವ ತಪ್ಪಿಗೆ, ನಮಗೆ ಈ ರೀತಿ ಯಾಕೆ ಮಾಡುತ್ತಿದ್ದಾರೆ ಅಂಥ ಪ್ರಶ್ನೆ ಮಾಡುತ್ತಿದ್ದರೆ.

ಈ ನಡುವೆ ಇಂದು ಬೆಳಗ್ಗೆ 10 ಗಂಟೆಗೆ ನಗರದ ಫ್ರೀಡಂ ಪಾರ್ಕ್​ ಬಳಿ ಉಪವಾಸ ಕೈಗೊಳ್ಳಲಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಈ ನಡುವೆ ಪಿಎಸ್‌ಐ ಎಕ್ಸಾಂನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಪಟ್ಟಂತೆ ಸದ್ಯ ಸಿಐಡಿ ಪೋಲಿಸರ ಬಂಧನದಲ್ಲಿರುವ ಪ್ರಮುಖ ಆರೋಪಿ ದಿವ್ಯ ಹಾರಂಗಿ ಸೇರಿದಂತೆ ಒಟ್ಟು 7 ಮಂದಿಯನ್ನು ಶುಕ್ರವಾರ ಕಲಬುರಗಿ ಜಿಲ್ಲಾ ನ್ಯಾಯಾಲಯದ ಮೂರನೇ ಜೆಎಂಎಫ್‌ ನ್ಯಾಯಾಧೀಶರು ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.

ಅರ್ಚನ, ಸುನೀತ, ಕಾಳಿದಾಸ್‌, ಸುನೀತಾ ಪಾಟೀಲ್‌, ಸುರೇಶ್ ಕಾಟೇಗಾವ್‌, ಸದ್ದಾಂ, ದಿವ್ಯಹಾಗರಗಿ, ಆರೋಪಿಗಳನ್ನು ಸಿಐಡಿ ವಶಕ್ಕೆ ನೀಡಲು ನ್ಯಾಯಾಧೀಶರ ಬಳಿ ಸಿಐಡಿ ಪರ ವಕೀಲರು ಮನವಿ ಮಾಡಿಕೊಂಡಿದ್ದರು, ಅದರಂಥೆ ಅವರನ್ನು ವಶಕ್ಕೆ ನೀಡಲು ನ್ಯಾಯಾಧೀಶರು ಮಾನ್ಯ ಮಾಡಿದ್ದಾರೆ.

ಅಂದ ಹಾಗೇ 545 ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ಸಂಬಂಧ ಪ್ರಮುಖ ಆರೋಪಿ ದಿವ್ಯಾ ಹಾಗರಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಜ್ಞಾನಜ್ಯೋತಿ ಶಾಲೆಯಲ್ಲಿ ಪಿಎಸ್ ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು ಎಂದು ತನಿಖೆ ವೇಳೆ ತಿಳಿದುಬಂದಿತ್ತು. ಬಳಿಕ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದರು. ಸತತ ಹುಡುಕಾಟದ ಬಳಿಕ ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ ಮನೆ ಮೇಲೆ ದಾಳಿ ನಡೆಸಿದ್ದ ಸಿಐಡಿ ತಂಡವು ತನಿಖೆಗೆ ಅಸಹಕಾರ, ಆರೋಪಿಗಳ ನಾಪತ್ತೆಗೆ ಬೆಂಬಲ ಆರೋಪದ ಮೇಲೆ ರಾಜೇಶ್ ಹಾಗರಗಿಯನ್ನು ಬಂಧಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು