News Karnataka Kannada
Monday, April 29 2024
ಬೆಂಗಳೂರು

ಕರೋನಾ ಮೂರನೇ ಅಲೆ ತಡೆಯಲು ಲಸಿಕೆ ಅನಿವಾರ್ಯ: ಶಾಸಕ ರವಿಸುಬ್ರಮಣ್ಯ

Rally Bng 14082021
Photo Credit :

ಬೆಂಗಳೂರು: ಕರೋನಾ ಮೂರನೇ ಅಲೆ ಹಾಗೂ ಹೆಚ್ಚಿನ ಪ್ರಾಣಹಾನಿಯನ್ನು ತಡೆಯಲು ಲಸಿಕೆಯನ್ನು ಪಡೆದುಕೊಳ್ಳುವುದು ಅನಿವಾರ್ಯ ಎಂದು ಬಸವನಗುಡಿ ಶಾಸಕ ರವಿಸುಬ್ರಮಣ್ಯ ಹೇಳಿದರು.

ಕರೋನಾ ಸಾಂಕ್ರಾಮಿಕದ ವಿರುದ್ದ ಹೋರಾಟದ ಪ್ರಮುಖ ಅಸ್ತ್ರವಾಗಿರುವ ಲಸಿಕಾಕರಣದ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಜಯನಗರದ ಯುನೈಟೆಡ್‌ ಆಸ್ಪತ್ರೆಯ ಸಹಯೋಗದಲ್ಲಿ ರೋಟರ‍್ಯಾಕ್ಟ್‌ ಬೆಂಗಳೂರು ಸೌತ್‌ ಆಯೋಜಿಸಿದ್ದ ಸೈಕಲ್‌ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ಕರೋನಾ ಮೂರನೇ ಅಲೆಯ ಪರಿಣಾಮ ನಿಧಾನವಾಗಿ ಗೋಚರವಾಗುತ್ತಿದೆ. ಇದನ್ನು ತಡೆಯವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ಬಹಳ ಅವಶ್ಯಕ. ಈ ನಿಟ್ಟಿನಲ್ಲಿ ಜಯನಗರದ ಯುನೈಟೆಡ್‌ ಆಸ್ಪತ್ರೆ ರೋಟರ‍್ಯಾಕ್ಟ್‌ ಜೊತೆಗೂಡಿ ಜಾಗೃತಿ ರ‍್ಯಾಲಿಯನ್ನು ಆಯೋಜಿಸಿರುವುದು ಬಹಳ ಒಳ್ಳೆಯ ಕೆಲಸವಾಗಿದೆ. ಜನರು ಇದುವರೆಗೂ ಲಸಿಕೆಯನ್ನು ಹಾಕಿಸಿಕೊಳ್ಳದೇ ಇರುವಂತಹವರು ಕೂಡಲೇ ಲಸಿಕೆಯನ್ನು ಹಾಕಿಸಿಕೊಳ್ಳಲು ಮುಂದಾಗಬೇಕು.

ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ. ವಿಕ್ರಮ್‌ಸಿದ್ದಾರೆಡ್ಡಿ ಮಾತನಾಡಿ, ಕರೋನಾ ಮೂರನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖ ಅಸ್ತ್ರವಾಗಿರುವ ಕರೋನಾ ಲಸಿಕಾಕರಣದ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಬಹಳ ಅವಶ್ಯಕವಾಗಿದೆ. ನಮ್ಮ ಆಸ್ಪತ್ರೆಯ ಸಾಮಾಜಿಕ ಕಳಕಳಿಯ ಹಿನ್ನೆಲೆಯಲ್ಲಿ ನಾವುಗಳು ಇಂದು ಈ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದು, ಇಲ್ಲಿ ಭಾಗವಹಿಸಿರುವ ಎಲ್ಲಾ ಸೈಕ್ಲಿಸ್ಟ್‌ ಗಳಿಗೆ ಉಚಿತವಾಗಿ ಎರಡೂ ಡೋಸ್‌ಗಳ ಲಸಿಕೆಯನ್ನು ನೀಡುತ್ತಿದ್ದೇವೆ ಎಂದು ಹೇಳಿದರು.

ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ ಮಾತನಾಡಿ, ನಮ್ಮ ಆಸ್ಪತ್ರೆಯಲ್ಲಿ‌ ಡೆಲ್ಟಾ ಪ್ಲಸ್‌ ವೇರಿಯೆಂಟ್‌ ನ್ನು ಪರಿಣಾಮಕಾರಿಯಾಗಿ ತಡೆಯಬಲ್ಲಂತಹ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿದೆ. ಈ ಲಸಿಕೆಯನ್ನು ಎಲ್ಲ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ನಾವು ನಮ್ಮ ಸಹಯೋಗಿ 20 ಆಸ್ಪತ್ರೆಗಳ ಜೊತೆಯಲ್ಲಿ 210 ರೂಪಾಯಿಗಳ ರಿಯಾಯಿತಿ (1410-210=1200) ಯ ದರದಲ್ಲಿ ನೀಡುತ್ತಿದ್ದೇವೆ. ಈ ಸೌಲಭ್ಯವನ್ನು ಜನರು ಬೆಂಗಳೂರು ನಗರದಾದ್ಯಂತ ಹರಡಿರುವ ನಮ್ಮ ಸಹಯೋಗಿ ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಲು ಸುಲಭವಾದ ತಂತ್ರಜ್ಞಾನ ರೂಪಿಸಲಾಗಿದೆ. https://www.unitedhospital.in/united-bangalore/covid-vaccination-registration ವೆಬ್‌ಸೈಟ್‌ ಮೂಲಕ ಗೂಗಲ್‌ ಮ್ಯಾಪ್‌ ಬಳಸಿಕೊಂಡು ನಿಮ್ಮ ಹತ್ತಿರದ ಲಸಿಕಾ ಕೇಂದ್ರಗಳನ್ನು ಗುರುತಿಸಬಹುದಾಗಿದೆ. ಅಲ್ಲದೆ +91 9916977777 ವಾಟ್ಸಾಪ್‌ ಮೂಲಕವೂ ಲಸಿಕೆಗೆ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಸೈಕಲ್‌ ರ‍್ಯಾಲಿಯಲ್ಲಿ 250 ಕ್ಕೂ ಹೆಚ್ಚು ಸೈಕ್ಲಿಸ್ಟ್ ಗಳು, ವೈದ್ಯರುಗಳು, ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್‌ ವರ್ಕರ್ ಗಳು ಪಾಲ್ಗೊಂಡಿದ್ದರು. 6 ಕಿಲೋಮೀಟರ್‌ ಗಳಷ್ಟು ನಡೆದ ಸೈಕಲ್‌ ರ‍್ಯಾಲಿಯಲ್ಲಿ ಲಸಿಕೆಯ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು