ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಶಾಲೆ ಪುನರಾರಂಭ, ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಇನ್ನಿತರ ಮುಖ್ಯ ವಿಚಾರಗಳ ಬಗ್ಗೆ ಈ ಸಭೆಯಲ್ಲಿ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ಗಡಿಗೆ ಹೊಂದಿಕೊಂಡ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಜನಸಂಚಾರ ಹೆಚ್ಚುತ್ತಿರುವುದರಿಂದ ನಿರ್ಬಂಧ ಹೇರಬೇಕು. ರಾಜ್ಯದ ಇತರ ಜಿಲ್ಲೆಗಳಲ್ಲೂ ಪರಿಸ್ಥಿತಿಗೆ ಅನುಗುಣವಾಗಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಜ್ಞರ ಸಮಿತಿ ಸರಕಾರಕ್ಕೆ ಸಲಹೆ ನೀಡಿದೆ.
ಈ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ನಡೆಯುವ ಸಭೆ ಮಹತ್ವದ್ದಾಗಿದೆ. ಶನಿವಾರ ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆಯಲಿದ್ದು, ಉನ್ನತಾಧಿಕಾರಿಗಳು ಭಾಗಿಯಾಗಲಿದ್ದಾರೆ. ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳಲಾಗುತ್ತಿದೆ.