News Karnataka Kannada
Thursday, May 02 2024
ಬೆಂಗಳೂರು

 ಕರ್ನಾಟಕದಲ್ಲಿ ಅಸಾನಿ ಚಂಡಮಾರುತ ಭೀತಿ : ಇಂದಿನಿಂದ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Untitled 3
Photo Credit :

ಬೆಂಗಳೂರು: ಆಂಧ್ರಪ್ರದೇಶದ ದಕ್ಷಿಣ ಭಾಗ ಮತ್ತು ಒಡಿಶಾದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ಕರ್ನಾಟಕ ಸೇರಿದಂತೆ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆಯನ್ನೂ ಸಹ ನೀಡಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಈ ಪ್ರದೇಶಗಳಲ್ಲಿ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಚಂಡಮಾರುತಕ್ಕೆ ʼಅಸಾನಿʼ ಎಂದು ಹೆಸರಿಡಲಾಗಿದೆ. ಅಸಾನಿ ಎಂದರೆ ಶ್ರೀಲಂಕಾದ ಸಿಂಹಳಿ ಭಾಷೆಯಲ್ಲಿ ಕ್ರೋಧ ಎಂದರ್ಥ. ಸದ್ಯ ಚಂಡಮಾರುತದ ಅಬ್ಬರ ಒಡಿಶಾ ಕಡೆಗೆ ಸಾಗುತ್ತಿದ್ದು, ಮೇ 9 ಮತ್ತು 10ರಂದು ಮಳೆಯಾಗುವ ಸಾಧ್ಯತೆಯಿದೆ. ಇನ್ನು ಗಂಟೆಗೆ 80 ರಿಂದ 90 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಅಂದಾಜು ಮಾಡಲಾಗಿದೆ. ಮೇ 10 ರ ಬಳಿಕ ಗಾಳಿಯ ವೇಗ ಕಡಿಮೆಯಾಗಲಿದೆ ಎನ್ನಲಾಗಿದೆ. ಮೇ 9 ಮತ್ತು 10 ರಂದು ಆಂಧ್ರಪ್ರದೇಶ ಹಾಗೂ ಒಡಿಶಾದ 17 ಜಿಲ್ಲೆಗಳಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ಕರ್ನಾಟಕದ ಹಲವೆಡೆ ಕಳೆದ ಒಂದು ವಾರದಿಂದ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಇಂದೂ ಸಹ ಮಧ್ಯಾಹ್ನದ ಬಳಿಕ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಒಂದೆಡೆ ಉತ್ತರ ಭಾರತ ಬಿಸಿಲಿಗೆ ತತ್ತರಿಸುತ್ತಿದೆ. ಇನ್ನೊಂದೆಡೆ ದಕ್ಷಿಣ ಭಾರತದಲ್ಲಿ ಮಳೆ ಅಬ್ಬರ ಶುರುವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು