News Karnataka Kannada
Monday, April 29 2024
ಬೆಂಗಳೂರು

ಕರ್ನಾಟಕದಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

Bengaluru: Cm Bommai to visit Haveri, Dharwad districts
Photo Credit :

ಬೆಂಗಳೂರು: ಕರ್ನಾಟಕದಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿಲ್ಲ .ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ ಕೇಸ್‌ ಹೆಚ್ಚಳವಾಗಿದ್ದು, ಈ ಹಿನ್ನಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಯಾ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ

ಅವರು ಇದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆಮಾಹಿತಿ ನೀಡಿದರು.ಇದೇ ವೇಳೆ ಅವರು ಧಾರವಾಡದ ಎಸ್‌ಡಿಎಂ ಮೆಡಿಕಲ್‌ ಕಾಲೇಜಿನಲ್ಲಿ ಉಂಟಾಗಿರುವ ಕೋವಿಡ್ ಸ್ಪೋಟಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಿ ಸದ್ಯ ಆಸ್ಪತ್ರೆಯ ಒಪಿಡಿಯನ್ನು ಬಂದ್‌ ಮಾಡಲಾಗಿದ್ದು, ಎಲ್ಲಾ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ .

ಇನ್ನೂ ರಾಜ್ಯದ ಏರ್‌ಪೋರ್ಟ್‌ಗಳಲ್ಲಿ ಕಡ್ಡಾಯವಾಗಿ ನೆಗೆಟಿವ್‌ ಇರೋರಿಗೆ ಮಾತ್ರ ವಿಮಾನ ನಿಲ್ದಾಣದಿಂದ ಅವಕಾಶ ನೀಡಲಾಗುತ್ತದೆ, ಇಲ್ಲವಾದಲ್ಲಿ ವೈದ್ಯಕೀಯ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತದೆ ಅಂತ ಹೇಳಿದರು. ಇನ್ನೂ ರಾಜ್ಯದ ಗಡಿ ಭಾಗಗಳಲ್ಲಿ ಈ ಸೂಕ್ತವಾದ ಕ್ರಮವನ್ನು ಕೈಗೊಳ್ಳಾಗಿದ್ದು, ಗಡಿ ಭಾಗಗಳಲ್ಲಿ ಸೂಕ್ತ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಾಗುವುದು, ಇದಲ್ಲದೇ ಬೂಸ್ಟರ್‌ ಡೋಸ್‌ ನೀಡುವುದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದಿಂದ ಚರ್ಚೆ ನಡೆಸಲಾಗುತ್ತಿದೆ ಅನುಮತಿ ಸಿಕ್ಕ ಬಳಿಕ ಚಾಲನೆ ನೀಡಲಾಗುತ್ತದೆ ಅಂತ ತಿಳಿಸಿದರು. ಇದೇ ವೇಳೆ ಅವರು ಮೂರು ದೇಶಗಳಿಗೆ ವಿಮಾನ ಪ್ರಯಾಣ ಬ್ಯಾನ್‌ ಮಾಡುವುದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಳ್ಳಲಾಗಿದೆ  ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು