ಕರ್ನಾಟಕದ 11 ಪೊಲೀಸರಿಗೆ ವಿಶೇಷ ಕಾರ್ಯಾಚರಣೆಗೆ ನೀಡುವ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ ಆಗಿದೆ. ಐಪಿಎಸ್ ಅಧಿಕಾರಿ ಸಂತೋಷ್ ಬಾಬುಗೆ ಪದಕ ಘೋಷಣೆ ಮಾಡಲಾಗಿದೆ.
ಇನ್ಸ್ಪೆಕ್ಟರ್ಗಳಾದ ಜಿ.ಬಾಲರಾಜ್, ಪಿ.ಶಶಿಕುಮಾರ್, ಹೆಚ್.ವಿ. ಸುದರ್ಶನ್, ಎಸ್.ಆರ್. ಶ್ರೀಧರ್ಗೆ ಪದಕ ಲಭಿಸಿದೆ. ಎಎಸ್ಐಗಳಾದ ಶೌಖತ್ ಅಲಿ, ಫಕ್ರುದ್ದೀನ್, ಅಕ್ಬರ್ ಸೋಮಶೇಖರ್, ಕೃಷ್ಣ ದೇವೇಗೌಡಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಕೇಂದ್ರ ಗೃಹ ಇಲಾಖೆಯ ಡೈರೆಕ್ಟರ್ ( ಪೊಲೀಸ್ ) ಎ.ಕೆ.ಶರನ್ ಅವರು ಪಟ್ಟಿಯನ್ನು ಪ್ರಕಟಿಸಿದ್ದು, 2020-21ನೇ ಸಾಲಿನ ಕೇಂದ್ರ ಗೃಹ ಸಚಿವರ ವಿಶೇಷ ಕಾರ್ಯಾಚರಣೆ ಪದಕವನ್ನು ಪ್ರಕಟಿಸಲಾಗಿದೆ. ವಿವಿಧ ರಾಜ್ಯಗಳಲ್ಲಿ ಪೊಲೀಸ್ ಅಧಿಕಾರಿಗಳು ಕೇಂದ್ರ ಗೃಹ ಸಚಿವರ ವಿಶೇಷ ಕಾರ್ಯಾಚರಣೆ ಪದಕ ಪಡೆದಿದ್ದಾಗಿ ತಿಳಿಸಿದ್ದಾರೆ.