ಬೆಂಗಳೂರು : ಉತ್ತರ ಪ್ರದೇಶದ ಮಾದರಿಯಲ್ಲಿ ಕರ್ನಾಟಕದಲ್ಲೂ ಬುಲ್ಡೋಜರ್ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಸಿಎಂ ಬಸವರಾಜ್ ಬೊಮ್ಮಾಯಿ ಜತೆ ಚರ್ಚೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಉತ್ತರ ಪ್ರದೇಶದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಬುಲ್ಡೋಜರ್ ಪ್ರಯೋಗ ಜಾರಿಗೆ ಬರಬೇಕು.
ಇನ್ನು ಹುಬ್ಬಳ್ಳಿ ಗಲಭೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಹುಬ್ಬಳ್ಳಿ ದಾಂಧಲೆಕೋರರ ಜತೆ ವಿದೇಶಿಗರ ಜೊತೆಗೆ ನಂಟಿರಬಹುದು. ಐಎಸ್ಐ ಸಂಪರ್ಕ, ಪಾಕ್ ಪರ ಜೈ ಅನ್ನುವವರು ಇದ್ದಾರೆ. ತುಂಬಾ ಜನ ಒಳ್ಳೆಯವರಿದ್ದಾರೆ. ದಂಗೆಕೋರರಿಗೆ ಮನೆನೂ ಸಿಗಬಾರದು, ಆ ತರಹ ಮಾಡಬೇಕು. ಬುಲ್ಡೋಜರ್ ಪ್ರಯೋಗದ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.