News Karnataka Kannada
Monday, May 06 2024
ಬೆಂಗಳೂರು

ಕವಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ಇನ್ನಿಲ್ಲ

New Project 2021 12 14t095623.810
Photo Credit :

ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ವ) ಅವರು ತೀವ್ರ ಜ್ವರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.ರಾಜೇಶ್ವರಿ ಅವರು ಪತಿ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದಲ್ಲಿ ಒಬ್ಬರೇ ವಾಸವಾಗಿದ್ದರು. ಕಳೆದ ಕೆಲ ದಿನದ ಹಿಂದೆ ಬೆಂಗಳೂರಿನ ಮಗಳ ಮನೆಗೆ ಹೋಗಿದ್ದರು.

 

ರಾಜೇಶ್ವರಿ ತೇಜಸ್ವಿ ಅವರು ‘ನನ್ನ ತೇಜಸ್ವಿ’ ಮತ್ತು ‘ನಮ್ಮ ಮನೆಗೂ ಬಂದರು ಗಾಂಧೀಜಿ’ ಪುಸ್ತಕಗಳನ್ನು ಬರೆದಿದ್ದಾರೆ.

ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನ ಪುತ್ರಿಯ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಜೆ 5-30 ರ ವರೆಗೆ ಅಂತಿಮ ದರ್ಶನ ಇರಲಿದೆ‌. ಆಸ್ಪತ್ರೆಗೆ ದೇಹದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು