ಬೆಂಗಳೂರು : ಕಾಂಗ್ರೆಸ್ ನಾಯಕಿ ಸೋಗಿನಲ್ಲಿ ರಾಜ್ಯ ಗೃಹ ಇಲಾಖೆಯಲ್ಲಿ ಸಹಾಯಕರ ಹುದ್ದೆ ಕೊಡಿಸುವುದಾಗಿ ನಂಬಿಸಿ ಸುಮಾರು 55 ಉದ್ಯೋಗಾಂಕ್ಷಿಗಳಿಂದ 1.62 ಕೋಟಿ ವಸೂಲಿ ಮಾಡಿ ವಂಚಿಸಿರುವ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಮಾರಸ್ವಾಮಿಲೇಔಟ್ ನಿವಾಸಿ ಕೆ.ಜಿ.ಮಂಜುನಾಥ್ ಎಂಬುವರೇ ದೂರು ಕೊಟ್ಟಿದ್ದು, ಅದರನ್ವಯ ಕೆಪಿಸಿಸಿ ಕಾರ್ಮಿಕ ವಿಭಾಗದ ಉಪಾಧ್ಯಕ್ಷೆ ರಾಧಾ ಉಮೇಶ್, ಶ್ರೀಲೇಖಾ, ಹಾಗೂ ಸಂಪತ್ಕುಮಾರ್ ವಿರುದ್ಧ ವಂಚನೆ ಆರೋಪದಡಿ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.