ಬೆಂಗಳೂರು: ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಹೇಳಿಕೆ ವಿಚಾರವಾಗಿ ಈಗಾಗಲೇ ಪೊಲೀಸರು ಎರಡು ಬಾರಿ ನೋಟೀಸ್ ನೀಡಿದ್ದಾರೆ.ಕಾನೂನಿನ ಪ್ರಕಾರ ತನಿಖೆ ನಡೆಯುತ್ತಿದೆ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ ಎಂದರು.
ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಂತೆ ಹಂಸಲೇಖ ಕೂಡ ಕಾನೂನಿನಡಿ ಬರುತ್ತಾರೆ. ಅವರು ಒಬ್ಬ ಪ್ರತಿಭಾವಂತ ವ್ಯಕ್ತಿ. ಹಾಗಂತ ಕಾನೂನಿಗಿಂತ ದೊಡ್ಡವರಲ್ಲ ಎಂದು ಹೇಳಿದರು.