ಬೆಂಗಳೂರು : ಪ್ರಸ್ತುತ ವರ್ಷದಿಂದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ. ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವ ಮೂಲಕ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು ಪ್ರಾರಂಭಿಸಲಾಯಿತು. ಕಿತ್ತೂರು ರಾಣಿ ಚೆನ್ನಮ್ಮ ನಾಡು ಕಂಡ ದಿಟ್ಟ ಧೀಮಂತ, ಶ್ರೇಷ್ಠ ಸ್ವತಂತ್ರ್ಯ ಹೋರಾಟಗಾರರಲ್ಲಿ ಒಬ್ಬರು ಎಂದರು.
ರಾಜ್ಯಕ್ಕೆ ಕಿತ್ತೂರು ಚನ್ನಮ್ಮನ ಕೊಡುಗೆ ಅಪಾರ. ಇವರ ಕೊಡುಗೆಯನ್ನು ಸ್ಮರಿಸಿ , ಅವರ ಆಶೋತ್ತರಗಳನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.