News Karnataka Kannada
Sunday, April 28 2024
ಬೆಂಗಳೂರು

ಕುಡಿದ ಮತ್ತಿನಲ್ಲಿ ಕಲ್ಲು ಎತ್ತಿ ಹಾಕಿ ಸ್ನೇಹಿತನ ಕೊಲೆ

Death 20072021
Photo Credit :

ಬೆಂಗಳೂರು: ಕುಡಿದ ಮತ್ತಿನಲ್ಲಿ ಆರಂಭವಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಶ್ರೀನಿವಾಸನಗರ ನಿವಾಸಿ ನಿತೇಶ್ ಮೃತರು. ನಿತೇಶ್​ ಹಾಗೂ ಆತನ ಸ್ನೇಹಿತ ಪ್ರಶಾಂತ್ ತಡರಾತ್ರಿಯವರೆಗೂ​ ಪಾರ್ಟಿ ಮಾಡಿದ್ದರು. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆ ಆರಂಭವಾಗಿದ್ದು, ಕೊನೆಗೆ ಜಗಳ ತಾರಕಕ್ಕೇರಿ ಪ್ರಶಾಂತ್ ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಪಾರ್ಟಿ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಪ್ರಶಾಂತ್‌ನನ್ನ ನಿತೇಶ್ ಕಾಲಿನಿಂದ ಒದ್ದಿದ್ದ. ಸ್ವಲ್ಪ ಹೊತ್ತಿನ ಬಳಿಕ ಇಬ್ಬರೂ ಸುಮ್ಮನಾಗಿ ಮಲಗಿದ್ದರು. ಮಲಗಿ ಸ್ವಲ್ಪ ಸಮಯ ಕಳೆಯುತ್ತಿದ್ದಂತೆ ಪ್ರಶಾಂತ್ ಕೋಪದಿಂದ್ದ ಮತ್ತೆ ಎಚ್ಚರಗೊಂಡಿದ್ದಾನೆ. ನಂತರ ನಿತೇಶ್ ತಲೆ ಮೇಲೆ ಸಿಮೆಂಟ್ ಇಟ್ಟಿಗೆಯನ್ನು ಎತ್ತಿಹಾಕಿ ಕೊಲೆ ಮಾಡಿದ್ದಾನೆ.

ಸ್ಥಳಕ್ಕೆ ಡಿ.ಜೆ.ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗುತಿದ್ದ ಪ್ರಶಾಂತ್, ಪಪ್ಪಲ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು