News Karnataka Kannada
Wednesday, May 08 2024
ಬೆಂಗಳೂರು

ಕೃಷಿ ಉತ್ಪನ್ನಗಳ ನೇರ ಲಾಭ ಉತ್ಪಾದಕರಿಗೆ ದೊರೆಯಬೇಕು : ಸಿಎಂ

Basavaraj Bommaih V Ponnuraj 01082021
Photo Credit :

ಬೆಂಗಳೂರು: ಕೃಷಿ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ವೇದಿಕೆಯಲ್ಲಿ ಅವಕಾಶ ದೊರೆಯಬೇಕು ಹಾಗೂ ಇದರ ನೇರ ಲಾಭ ಉತ್ಪಾದಕರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಅವರು ಗುರುವಾರ ತಮ್ಮನ್ನು ಭೇಟಿಯಾದ ಫ್ಲಿಪ್ ಕಾರ್ಟ್ ಸಂಸ್ಥೆಯ ರಜನೀಶ್ ಕುಮಾರ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಫ್ಲಿಪ್ ಕಾರ್ಟ್ ಸಂಸ್ಥೆಯು ರಾಜ್ಯದಲ್ಲಿ ಸಾವಿರಾರು ಜನರಿಗೆ ಉದ್ಯೋಗ ನೀಡಿರುವುದಲ್ಲದೆ, ರೈತರು, ಸಣ್ಣ ಉತ್ಪಾದಕರಿಗೆ, ಕರಕುಶಲ ವಸ್ತುಗಳ ವ್ಯಾಪಾರಕ್ಕೆ ಅವಕಾಶ ಒದಗಿಸಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ರೈತರಿಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಯೊಂದಿಗೆ ಇ-ಕಾಮರ್ಸ್ ವೇದಿಕೆ ಮೂಲಕ ಮಾರುಕಟ್ಟೆಯ ಬೇಡಿಕೆಗಳ ಕುರಿತು ಮಾಹಿತಿಯೂ ದೊರೆಯುವಂತಿರಬೇಕು. ಇದರಿಂದ ಅವರಿಗೆ ಅನುಕೂಲವಾಗುವುದು ಎಂದು ನುಡಿದರು.

ರಾಜ್ಯದಲ್ಲಿ ಕೃಷಿ ಉತ್ಪನ್ನಗಳು, ಕರಕುಶಲ ಕರ್ಮಿಗಳು, ನೇಕಾರರಿಗೆ ಹೆಚ್ಚಿನ ಬೆಂಬಲ ನೀಡುವಂತೆ ಸಲಹೆ ನೀಡಿದರು. ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿರುವ ರಾಜ್ಯದಲ್ಲಿ ಕಾಫಿ, ಸಂಬಾರ ಪದಾರ್ಥಗಳು, ಜೋಳ, ಎಣ್ಣೆ ಬೀಜ, ತೃಣಧಾನ್ಯಗಳು ಹೀಗಿ ವೈವಿಧ್ಯಮಯ ಉತ್ಪನ್ನಗಳು ಲಭ್ಯವಿದೆ. ಇವುಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಕೈಜೋಡಿಸುವಂತೆ ಸಲಹೆ ನೀಡಿದರು. ಈ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳುವಂತೆ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು