ಕೃಷಿ ಉತ್ಪನ್ನಗಳ ನೇರ ಲಾಭ ಉತ್ಪಾದಕರಿಗೆ ದೊರೆಯಬೇಕು : ಸಿಎಂ

ಬೆಂಗಳೂರು: ಕೃಷಿ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ವೇದಿಕೆಯಲ್ಲಿ ಅವಕಾಶ ದೊರೆಯಬೇಕು ಹಾಗೂ ಇದರ ನೇರ ಲಾಭ ಉತ್ಪಾದಕರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಅವರು ಗುರುವಾರ ತಮ್ಮನ್ನು ಭೇಟಿಯಾದ ಫ್ಲಿಪ್ ಕಾರ್ಟ್ ಸಂಸ್ಥೆಯ ರಜನೀಶ್ ಕುಮಾರ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಫ್ಲಿಪ್ ಕಾರ್ಟ್ ಸಂಸ್ಥೆಯು ರಾಜ್ಯದಲ್ಲಿ ಸಾವಿರಾರು ಜನರಿಗೆ ಉದ್ಯೋಗ ನೀಡಿರುವುದಲ್ಲದೆ, ರೈತರು, ಸಣ್ಣ ಉತ್ಪಾದಕರಿಗೆ, ಕರಕುಶಲ ವಸ್ತುಗಳ ವ್ಯಾಪಾರಕ್ಕೆ ಅವಕಾಶ ಒದಗಿಸಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ರೈತರಿಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಯೊಂದಿಗೆ ಇ-ಕಾಮರ್ಸ್ ವೇದಿಕೆ ಮೂಲಕ ಮಾರುಕಟ್ಟೆಯ ಬೇಡಿಕೆಗಳ ಕುರಿತು ಮಾಹಿತಿಯೂ ದೊರೆಯುವಂತಿರಬೇಕು. ಇದರಿಂದ ಅವರಿಗೆ ಅನುಕೂಲವಾಗುವುದು ಎಂದು ನುಡಿದರು.

ರಾಜ್ಯದಲ್ಲಿ ಕೃಷಿ ಉತ್ಪನ್ನಗಳು, ಕರಕುಶಲ ಕರ್ಮಿಗಳು, ನೇಕಾರರಿಗೆ ಹೆಚ್ಚಿನ ಬೆಂಬಲ ನೀಡುವಂತೆ ಸಲಹೆ ನೀಡಿದರು. ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿರುವ ರಾಜ್ಯದಲ್ಲಿ ಕಾಫಿ, ಸಂಬಾರ ಪದಾರ್ಥಗಳು, ಜೋಳ, ಎಣ್ಣೆ ಬೀಜ, ತೃಣಧಾನ್ಯಗಳು ಹೀಗಿ ವೈವಿಧ್ಯಮಯ ಉತ್ಪನ್ನಗಳು ಲಭ್ಯವಿದೆ. ಇವುಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಕೈಜೋಡಿಸುವಂತೆ ಸಲಹೆ ನೀಡಿದರು. ಈ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳುವಂತೆ ತಿಳಿಸಿದರು.

Raksha Deshpande

Recent Posts

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

39 seconds ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

25 mins ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

39 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

1 hour ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

2 hours ago