ಬೆಂಗಳೂರಿ : ಶಿವಾಜಿನಗರ ಸಮೀಪ ರಸ್ತೆಬದಿ ನಿಲ್ಲಿಸಿದ್ದ ಕಾರೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಶಿವಾಜಿನಗರದ ಕ್ವೀನ್ಸ್ ರಸ್ತೆಯಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಕೆಟ್ಟು ನಿಂತಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಅಕ್ಕಪಕ್ಕ ವಾಹನಗಳು ಇಲ್ಲದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಕಾರು ಹಲವು ದಿನಗಳಿಂದ ಬಳಕೆಯಾಗದೆ ಕೆಟ್ಟು ನಿಂತಿತ್ತು ಎಂದು ತಿಳಿದು ಬಂದಿದೆ.