ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ನಾಲ್ಕನೇ ಅಲೆಯ ಭೀತಿ ನಡುವೆಯೇ ಮೇ 16ರಿಂದ ಶಾಲೆ ಶುರುವಾಗ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಟಾಸ್ಕ್ ಪೋರ್ಸ್ ನಿಯಮಗಳನ್ನು ಪಾಲಿಸುತ್ತೇವೆ ಮಾಹಿತಿ ಪ್ರಕಾರ ಜೂನ್ ಜುಲೈನಲ್ಲಿ ಕೊರೊನಾ ನಾಲ್ಕನೇ ಅಲೆ ಬರುತ್ತದೆ ಹೇಳಿದ್ದಾರೆ.
ಮೇ 16ರಿಂದ ಶಾಲೆಯ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ಶಾಲೆ ತೆರೆಯಲಾಗುತ್ತದೆ.ಮಕ್ಕಳ ವಿದ್ಯಾಭಾಸ್ಯಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.