ಕೊರೋನಾ 3ನೇ ಅಲೆ ತಡೆಗಟ್ಟಲು ಎಲ್ಲರೂ ಕೈ ಜೋಡಿಸಬೇಕಿದೆ ; ಡಾ.ಸಿ.ಎನ್.ಮಂಜುನಾಥ್

ಬೆಂಗಳೂರು :.ಕೊರೊನ ಮೂರನೇ ಅಲಿಯನ್ನು ಓಡಿಸುವ ಮತ್ತು ನಿಯಂತ್ರಿಸುವ ಮಹತ್ವದ ಜವಾಬ್ದಾರಿ ಜನರ ಮೇಲೆ ಇದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರು ಹಾಗೂ ಕಾರ್ಯಪಡೆಯ ಸದಸ್ಯರಾದ ಡಾಕ್ಟರ್ ಸಿ ಎನ್ ಮಂಜುನಾಥ್ ತಿಳಿಸಿದರು.ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಕರೋನಾ ಕಾರ್ಯಪಡೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ 3ನೇ ಅಲೆ ಯಾವಾಗ ಬರುತ್ತದೆ ಎಂದು ಎಲ್ಲರ ಮನಸಲ್ಲಿ ಕಾಡುತ್ತಿದೆ ಆದರೆ ಇದನ್ನು ನಿರ್ಧರಿಸುವುದು ನಾವಲ್ಲ ಅಥವಾ ತಜ್ಞ ವೈದ್ಯರಲ್ಲ ಅದು ಜನರ ಮೇಲೆಯೇ ನಿಂತಿದೆ ಎಂದು ಹೇಳಿದರು.
ನಾವು ಎಷ್ಟು ಮುಂಜಾಗ್ರತೆ ಕ್ರಮ ವಹಿಸುತ್ತೇವೋ ಅಥವಾ ಈ ನಿಯಮವನ್ನು ಪಾಲಿಸುತ್ತೇವೆ ಅಷ್ಟು ನಮಗೆ ಕೊರೊನಾ ದಿಂದ ಸುರಕ್ಷತೆ ಸಿಗುತ್ತದೆ ಎಂದು ಅವರು ಹೇಳಿದರು.ಸರ್ಕಾರ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಬ್ಬಹರಿದಿನಗಳಂದು ಜನರು ಗುಂಪುಗೂಡುವುದು ಮತ್ತು ಊರಿಗೆ ತೆರಳುವುದು ಸೂಕ್ತವಲ್ಲ . ಇನ್ನೂ ಕನಿಷ್ಠ ಪಕ್ಷ 6ತಿಂಗಳಾದರೂ ನಾವು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಕೈಗಳನ್ನು ತೊಳೆಯುವುದು ಸ್ಯಾನಿಟೈಸರ್ ಬಳಸುವುದು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಒತ್ತಿ ಹೇಳಿದರು.

Indresh KC

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

6 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

6 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

7 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

7 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago