News Karnataka Kannada
Sunday, April 28 2024
ಬೆಂಗಳೂರು

ಕೋವಿಡ್ ಮೂರನೇ ಅಲೆ ಬರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು:ಆರ್.ಅಶೋಕ್

Ashok Revenue 28 6 21
Photo Credit :

ಬೆಂಗಳೂರು: ಓಮಿಕ್ರಾನ್ ಎಲ್ಲ ಕಡೆ ಹೆಚ್ಚಾಗುತ್ತಿದ್ದು,  2ನೇ ಅಲೆಯಲ್ಲಿ ಸಾಕಷ್ಟು ಸಾವುನೋವನ್ನು ಅನುಭವಿಸುವಂತಾಯಿತು. ಹೀಗಾಗಿ ಜನರ ರಕ್ಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸದ್ಯಕ್ಕೆ ಯಾವುದೇ ಕಠಿಣ ನಿಯಮಗಳನ್ನು ಜಾರಿ ಮಾಡಿಲ್ಲ. ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದರೆ ಆಸ್ಪತ್ರೆಗಳನ್ನು ಸುಸ್ಥಿತಿಯಲ್ಲಿಡಲು ಸೂಚನೆ ಕೊಡಲಾಗಿದೆ. ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಬರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು

ಆಕ್ಸಿಜನ್ ಪ್ಲಾಂಟ್, ಆಕ್ಸಿಜನ್ ಸಹಿತ ಹಾಸಿಗೆಗಳು ಸುಸ್ಥಿತಿಯಲ್ಲಿಡಲು ಆಸ್ಪತ್ರೆಗಳಿಗೆ ಸೂಚಿಸಿದ್ದೇವೆ. 2ನೇ ಅಲೆಯಿಂದ ಸಾಕಷ್ಟು ಪಾಠ ಕಲಿತುಕೊಂಡಿದ್ದೇವೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.

ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್‍ರ ಅಕಾಲಿಕ ಅಗಲಿಕೆ ನೋವು ತಂದಿದ್ದು, ಇಡೀ ದೇಶವೇ ನೋವಿನಲ್ಲಿದೆ. ನೆರೆಯ ಪಾಕಿಸ್ತಾನದಲ್ಲಿ ವ್ಯಂಗ್ಯ ಮಾಡಿ ಸಂಭ್ರಮಿಸಲಾಗುತ್ತಿರುವುದು ಹೀನ ಮನಸ್ಥಿತಿಯನ್ನು ತೋರುತ್ತದೆ ಎಂದು ಇದೇ ಸಂದರ್ಭದಲ್ಲಿ ಬೇಸರ ವ್ಯಕ್ತಪಡಿಸಿದರು.

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ರಾವತ್ ಅವರು ಪಾಕಿಸ್ತಾನದ ವಿರುದ್ಧದ ಹೋರಾಟದಲ್ಲೂ ಭಾಗಿಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು