ಇನ್ನು ಮುಂದೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಗೋ ಶಾಲೆಗಳನ್ನು ಕೆಎಂಎಫ್ (ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ ನಿಯಮಿತ) ನಿರ್ವಹಣೆ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದ ಪ್ರತೀ ಜಿಲ್ಲೆಯಲ್ಲಿಯೂ ಗೋಶಾಲೆ ತೆರೆಯಲಾಗುವುದು. ಆರಂಭದಲ್ಲಿ ಬೇಕಾದ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗುತ್ತದೆ. ನಂತರ ನಿರ್ವಹಣೆ ಜವಾಬ್ದಾರಿಯನ್ನು ಕೆಎಂಎಫ್ ನೋಡಿಕೊಳ್ಳಬೇಕು ಎಂದು ಹೇಳಿದರು.
ಗೋಶಾಲೆ ಪುಣ್ಯದ ಕೆಲಸ. ಅದನ್ನು ನಾವೆಲ್ಲ ಸೇರಿ ಮಾಡಬೇಕು. ಯಾವ ಜಿಲ್ಲೆಯಲ್ಲಿ ನೀರಾವರಿ, ಹಸಿರು ಇದೆಯೋ ಆ ಜಿಲ್ಲೆಯ ರೈತರಿಗೆ ಹೆಚ್ಚು ಗೋವುಗಳನ್ನು ನೀಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹೊಸ ಯೋಜನೆಗಳನ್ನು ಆರಂಭಿಸಲಾಗುವುದು ಎಂದರು.
ರಾಜ್ಯದಲ್ಲಿ ಹೊಸದಾಗಿ ಹಾಲು ಉತ್ಪಾದಕರ ಬ್ಯಾಂಕ್ ತೆರೆಯಲು ಸರ್ಕಾರವೂ 100 ಕೋಟಿ ರೂ. ಬಂಡವಾಳ ಹೂಡಲಿದೆ ಎಂದು ಸಿಎಂ ಹೇಳಿದ್ದಾರೆ.