ಬೆಂಗಳೂರು: ಮೊಬೈಲ್ ನ್ನು ಚಾರ್ಜ್ ಮಾಡುವ ವಿಷಯಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಗಲಾಟೆಯು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ.
ಮಧ್ಯಪ್ರದೇಶ ಮೂಲದ ಇಬ್ಬರು ಯುವಕರು ಕೂಲಿ ಕೆಲಸ ಮಾಡಿಕೊಂಡು ರಾಜಾಜಿನಗರದ ಮನೆಯಲ್ಲಿ ವಾಸವಾಗಿದ್ದರು. ಆದರೆ ಕೊಠಡಿಯಲ್ಲಿ ಒಂದೇ ಪ್ಲಗ್ ಪಾಯಿಂಟ್ ಇತ್ತು. ಇಬ್ಬರು ಮೊಬೈಲ್ ಚಾರ್ಜ್ ಹಾಕಲು ಒಂದೇ ಅದನ್ನೇ ಬಳಕೆ ಮಾಡುತ್ತಿದ್ದರು. ಈ ವೇಳೆ ನಾನು ಮೊದಲು ಛಾರ್ಜ್ ಮಾಡಿಕೊಳ್ಳುತ್ತೇನೆ ಎಂಬ ವಿಷಯಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು, ಆರೋಪಿ ಚಾರ್ಜ್ ಮಾಡುತ್ತಾನೆ.
ಇದಕ್ಕೆ ಮೃತ ಯುವಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಕುಪಿತಗೊಂಡ ಆರೋಪಿ, ಮೃತ ಯುವಕನಿಗೆ ಸೌದೆಯಿಂದ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಈ ಸಂಬಂಧ ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾರ್ಜ್ ಹಾಕುವ ವಿಷಯಕ್ಕೆ ಸ್ನೇಹಿತರ ಗಲಾಟೆ ; ಓರ್ವನ ಕೊಲೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.