News Karnataka Kannada
Monday, April 29 2024
ಬೆಂಗಳೂರು

ಚಿತ್ರಮಂದಿರಗಳಲ್ಲಿ ಶೇಕಡಾ 100ರಷ್ಟು ಆಸನ ಭರ್ತಿ ವಿಚಾರವಾಗಿ ಇನ್ನೆರಡು ಮೂರು ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಿ ನಿರ್ಧಾರ : ಡಾ ಕೆ ಸುಧಾಕರ್

Sudhakar
Photo Credit :

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇಕಡಾ 100ರಷ್ಟು ಆಸನ ಭರ್ತಿ ವಿಚಾರವಾಗಿ ಇನ್ನೆರಡು ಮೂರು ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಚಿತ್ರ ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರೋಕ್ಷವಾಗಿ ದಸರಾ ಹಬ್ಬಕ್ಕೆ ಮುನ್ನ ಥಿಯೇಟರ್ ಗಳಲ್ಲಿ ಸಂಪೂರ್ಣ ಸೀಟು ಭರ್ತಿಗೆ ಸರ್ಕಾರ ಅನುಮತಿ ನೀಡುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದ್ದಾರೆ.

ಇಂದು ಆರೋಗ್ಯ ಸಚಿವರನ್ನು ಭೇಟಿ ಮಾಡಿದ ಚಿತ್ರ ನಿರ್ಮಾಪಕರು ಕಳೆದ ಒಂದೂವರೆ ವರ್ಷದಿಂದ ಕೋವಿಡ್-19 ಸಂಕ್ರಾಮಿಕ ಮತ್ತು ಥಿಯೇಟರ್ ಗಳು ಸಂಪೂರ್ಣವಾಗಿ ತೆರೆಯದಿರುವುದರಿಂದ ಚಿತ್ರೋದ್ಯಮ ಸಾಕಷ್ಟು ಸಂಕಷ್ಟದಲ್ಲಿದೆ. ಹೀಗಾಗಿ ಥಿಯೇಟರ್ ಸಂಪೂರ್ಣ ಭರ್ತಿಗೆ ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡರು.

ಇದಕ್ಕೆ ಸಿಎಂ ಬೊಮ್ಮಾಯಿಯವರ ಜೊತೆ ಚರ್ಚೆ ಮಾಡಿ ಇನ್ನೆರಡು ಮೂರು ದಿನಗಳಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, 2-3 ದಿನಗಳಲ್ಲಿ ಈ ಬಗ್ಗೆ ಸಭೆಯನ್ನು ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಇದುವರೆಗೆ ಥಿಯೇಟರ್ ಗಳಲ್ಲಿ ಶೇಕಡಾ 50ರಷ್ಟು ಆಸನ ಭರ್ತಿಗೆ ಎರಡು ತಿಂಗಳ ಹಿಂದೆಯೇ ಅನುಮತಿ ಕೊಟ್ಟಿದ್ದೆವು. ಈಗ ಚಲನಚಿತ್ರ ನಿರ್ಮಾಪಕರು ಮತ್ತು ಪ್ರದರ್ಶಕರು ಬಂದು ಆದಷ್ಟು ಶೀಘ್ರದಲ್ಲಿ ಶೇಕಡಾ 100ರಷ್ಟು ಸೀಟು ಭರ್ತಿಗೆ ಮನವಿ ಮಾಡಿದ್ದಾರೆ. ನಾವು ಈಗಾಗಲೇ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರುಗಳು ಮತ್ತು ಸದಸ್ಯರುಗಳಿಗೆ ಪತ್ರ ಬರೆಯುವುದರ ಜೊತೆಗೆ ದೂರವಾಣಿ ಮೂಲಕ ಕೂಡ ಮಾತನಾಡಿದ್ದೇನೆ.

ಇಂದು ರಾಜ್ಯದಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಬೇರೆ ಬೇರೆ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ತೆಗೆದುಕೊಂಡಿರುವ ನಿಲುವುಗಳೇನು, ತಾಂತ್ರಿಕ ಸಲಹಾ ಸಮಿತಿಯ ಮಾರ್ಗಸೂಚಿ, ಅವರಿಗೆ ಸಹಕಾರ ಮತ್ತು ಮುನ್ನೆಚ್ಚರಿಕೆ ತೆಗೆದುಕೊಂಡು ನಾನು, ಮುಖ್ಯಮಂತ್ರಿಗಳು ಮತ್ತು ಹಿರಿಯ ಸಚಿವರುಗಳು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು